ಪ್ರಿಯ ರೈತರೇ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅರ್ಹ ಫಲಾನುಭವಿಗಳಿಗೆ ಸಿಹಿ ಸುದ್ದಿ ಒಂದು ಬಂದಿದೆ. ರಾಜ್ಯ ಸರ್ಕಾರವು ಈ ಯೋಜನೆಯ ತನ್ನ ಪಾಲಿನ ಕಂತನ್ನು ನೀಡಲು ಅರ್ಹ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಯಾವ ರೈತರಿಗೆ ಸಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕಂತಿನ ಹಣ ಸಿಗುತ್ತದೆ? ಎಷ್ಟು ಜನ ರೈತರಿಗೆ ಮತ್ತು ಎಷ್ಟು ಹಣ ಜಮಾ ಆಗಲಿದೆ ಎಂಬುದರ ಬಗ್ಗೆ ಇರುವ ಸಂಪೂರ್ಣವಾದ ಮಾಹಿತಿಯನ್ನು ಇವತ್ತಿನ ದಿನ ತಿಳಿದುಕೊಳ್ಳೋಣ.

ಕೇಂದ್ರ ಸರ್ಕಾರ ರೈತರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಹಾಗೂ ರೈತರನ್ನು ಆತ್ಮಹತ್ಯೆ ಅಂತಹ ಕಠಿಣ ನಿರ್ಧಾರದಿಂದ ದೂರ ಮಾಡಲು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈವರೆಗೆ ಈ ಯೋಜನೆಯಡಿ ರೈತರಿಗೆ ವಾರ್ಷಿಕವಾಗಿ ಮೂರು ಸಮಾನ ಕಂತುಗಳಲ್ಲಿ ತಲಾ 2ಸಾವಿರ ರೂಪಾಯಿಯಂತೆ ಒಟ್ಟು ಆರು ಸಾವಿರ ರೂಪಾಯಿಗಳನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಇದರೊಂದಿಗೆ ರಾಜ್ಯ ಸರ್ಕಾರವು ಸಹ ಈ ಯೋಜನೆ ಅಡಿ ಅರ್ಹ ಪಲಾನುಭವಿಗಳಿಗೆ ವರ್ಷಕ್ಕೆ 2 ಸಾವಿರ ರೂಪಾಯಿಗಳನ್ನು ಎರಡು ಕಂತುಗಳಂತೆ ಒಟ್ಟು ನಾಲ್ಕು ಸಾವಿರ ರೂಪಾಯಿಗಳನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತದೆ. ರಾಜ್ಯದಲ್ಲಿ 50 ಲಕ್ಷಕ್ಕಿಂತಲೂ ಹೆಚ್ಚು ಫಲಾನುಭವಿಗಳು ಈ ಯೋಜನೆ ಅಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ವಾರ್ಷಿಕವಾಗಿ ಹತ್ತು ಸಾವಿರ ರೂಪಾಯಿಗಳ ಸಹಾಯಧನವನ್ನು ಪಡೆದುಕೊಳ್ಳುತ್ತಿದ್ದಾರೆ. ಈಗಾಗಲೇ ಈ ಯೋಜನೆ ಅಡಿ 58 ಲಕ್ಷಕ್ಕೂ ಹೆಚ್ಚು ಜನರು ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಅರ್ಹತೆಯನ್ನು ಪಡೆದುಕೊಂಡ ರೈತರು ಮಾತ್ರ ಈ ಯೋಜನೆ ಲಾಭ ಪಡೆದುಕೊಳ್ಳಬಹುದಾಗಿದೆ.

ಇದೀಗ ರಾಜ್ಯ ಸರ್ಕಾರ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕಂತಿನ ಹಣವು ನಿಮ್ಮ ಖಾತೆಗೆ ಜಮಾ ಆಗಲಿದೆ. ಒಂದು ವೇಳೆ ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ ಯೋಜನೆಯ ಕಂತಿನ ಹಣ ಜಮಾ ಆಗುವುದಿಲ್ಲ. ಅರ್ಹ ರೈತರ ಫಲಾನುಭವಿಗಳ ಪಟ್ಟಿಯನ್ನು ನೀವು ಅಧಿಕೃತ ವೆಬ್ ಸೈಟ್ ನಲ್ಲಿ ಪರಿಶೀಲಿಸಬಹುದಾಗಿದೆ.

ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಸುಲಭವಾಗಿ ನೋಡಬಹುದು.

» ಇದಕ್ಕಾಗಿ ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು.

https://pmkisan.gov.in/

» ಅಲ್ಲಿ ಮುಖಪುಟದಲ್ಲಿ ಕಾಣುವ “ಫಾರ್ಮರ್ಸ್ ಕಾರ್ನರ್” ಎಂಬ ಆಯ್ಕೆಯನ್ನು ಆಯ್ಕೆ ಮಾಡಿಕೊಳ್ಳಬೇಕು.

» ಇದಾದ ನಂತರ ಆ ಮುಖಪುಟದಲ್ಲಿ ಕಾಣುವ “ಬೆನಿಫಿಶರ್ಟ್ ಲಿಸ್ಟ್” ಎಂಬ ಆಯ್ಕೆಯನ್ನು ಆಯ್ಕೆ ಮಾಡಿಕೊಳ್ಳಬೇಕು.

https://pmkisan.gov.in/Rpt_BeneficiaryStatus_pub.aspx

» ಅಲ್ಲಿ ನಿಮಗೆ ಕೇಳಲಾಗುವ ಮಾಹಿತಿ ವಿವರಗಳನ್ನು ನೀಡಿದ ನಂತರ ನಿಮ್ಮ ಗ್ರಾಮದ ಅರ್ಹ ಫಲಾನುಭವಿಗಳ ಪಟ್ಟಿ ತೆರೆದುಕೊಳ್ಳುತ್ತದೆ.

» ಆ ಪಟ್ಟಿಯಲ್ಲಿ ನಿಮ್ಮ ಗ್ರಾಮದ ಅರ್ಹ ರೈತರ ಫಲಾನುಭವಿಗಳ ಪಟ್ಟಿಯಿದ್ದು ಆ ಪಟ್ಟಿಯಲ್ಲಿ ನೀವು ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಬಹುದು.

ಹೀಗೆ ರೈತರು ಬಿಡುಗಡೆಯಾಗಿರುವ ಅರ್ಹ ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೂ ಇಲ್ಲವೂ ಎಂಬುದನ್ನು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.

ಇನ್ನು 13ನೇ ಕಂತಿನ ಹಣ ಬರುತ್ತದೆಯೋ ಇಲ್ಲವೋ ಎಂಬುದನ್ನು 2023ರ ಅರ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಸರಿಯಾಗಿ ಪರಿಶೀಲಿಸಿಕೊಂಡು ನಿಮಗೆ ಮುಂದಿನ ಕಂತನ ಹಣ ಬರುತ್ತದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಿ. ಒಂದು ವೇಳೆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮ್ಮ (ಜಿಲ್ಲೆಯ ಕೃಷಿ ಇಲಾಖೆ) ಅಥವಾ ನಿಮ್ಮ (ತಾಲೂಕಿನ ರೈತ ಸಂಪರ್ಕ ಕೇಂದ್ರಕ್ಕೆ) ಸಂಪರ್ಕಿಸಬಹುದು.

2023ರ ಇದೇ ತಿಂಗಳಲ್ಲಿ ರೈತರ ಖಾತೆಗೆ 13ನೇ ಕಂತನ ಹಣ ಜಮಾ ಆಗಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಇದಿಷ್ಟು ಪಿಎಂ ಕಿಸಾನ್ ಯೋಜನೆ ಬಗ್ಗಿ ಬಂದಿರುವ ಮಹತ್ವದ ಮಾಹಿತಿಯಾಗಿದ್ದು ಎಲ್ಲಾ ರೈತರು ಈ ಬಹುಮುಖ್ಯ ಮಾಹಿತಿಯ ಸದುಪಯೋಗವನ್ನು ಪಡೆದುಕೊಂಡು ಈ ಯೋಜನೆ ಲಾಭವನ್ನು ಪಡೆದುಕೊಳ್ಳಬೇಕು.

👉🏻ಕೃಷಿ ವಾಹಿನಿ🌱 ಡಿಜಿಟಲ್ ಮಾಧ್ಯಮವು ರೈತರಿಗೆ ಉಪಯೋಗವಾಗುವಂತಹ ಕೃಷಿಗೆ ಸಂಬಂಧಿತ ಸುದ್ದಿಗಳು, ಉದ್ಯೋಗ ಸಂಬಂಧಿತ ಸುದ್ದಿಯನ್ನು ಹಾಗೂ ಇನ್ನಿತರ ಎಲ್ಲಾ ತರಹದ ಮಾಹಿತಿಯನ್ನು ನಿಮಗೆ ನೀಡುತ್ತೇವೆ.

ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳ ಕಂಡ ಲಿಂಕ್ ಅನ್ನು ಬಳಸಿ 🏻

Leave a Reply

Your email address will not be published. Required fields are marked *