ರಾಜ್ಯದಲ್ಲಿ ಮುಂದಿನ 2 ದಿನ ಬಾರಿ ಮಳೆ ಸಾಧ್ಯತೆ. ಯಾವ ಜಿಲ್ಲೆ?? ಮಳೆಯ ಪ್ರಮಾಣ ತಿಳುದುಕೊಳ್ಳಿ ಮುಂದಿನ 2 ದಿನಗಳಲ್ಲಿ ಎಷ್ಟು ಮಳೆ ಆಗುವ ಸಾಧ್ಯತೆ ಇದೆ?

ಬನ್ನಿ ಯಾವ ಯಾವ ಜಿಲ್ಲೆಯಲ್ಲಿ ಎಂದು ಸಂಪೂರ್ಣ ಮಾಹಿತಿ ತಿಳಿಯೋಣ.

ಕರ್ನಾಟಕ ರಾಜ್ಯದಲ್ಲಿ ಪ್ರಕೃತಿ ಹಲವಾರು ಬದಲಾವಣೆಗಳನ್ನು ಕಂಡಿದೆ. ಬೇಸಿಗೆ ಕಾಲ, ಮಳೆಗಾಲ, ಎನ್ನದೆ ಹವಾಮಾನ ನಿರಂತರ ಬದಲಾವಣೆಗಳನ್ನು ಕಂಡಿದೆ. ದಿನಗಳು ಕಳೆದಂತೆ ಹಲವಾರು ನೈಸರ್ಗಿಕ ವಿಕೋಪ ಕಂಡುಬಂದಿದೆ. ಹಾಗಾಗಿ ರೈತರು ಸಹ ಹವಾಮಾನ ಬದಲಾವಣೆಗೆ ತಮ್ಮ ಕೃಷಿ ಚಟುವಟಿಕೆಗಳ ಬಗ್ಗೆ ಗಮನಹರಿಸಬೇಕು. ಸದ್ಯದಲ್ಲಿ ಉಸ್ತುವಾರಿ ಕೇಂದ್ರವು ಮುಂದಿನ ದಿನಗಳಲ್ಲಿ ಮುಂಗಾರು ಮಳೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ತಿಳಿಸಿದ್ದು, ಈ ಕುರಿತಂತೆ ವಿವರವಾದ ಮಾಹಿತಿಯನ್ನು ಪ್ರಕಟಿಸಿದೆ.

ಉತ್ತರ ಕರ್ನಾಟಕದ ಮಳೆ ಮಾಹಿತಿ ಬೀದರ್, ಗುಲ್ಬರ್ಗ, ರಾಯಚೂರು,ಬಾಗಲಕೋಟೆ, ಬೆಳಗಾವಿ ಕೊಪ್ಪಳ,ಹಾವೇರಿ ಹೀಗೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದ್ದು, ತಾಪಮಾನ ಮತ್ತು ಒಣಹವ ಮುಂದುವರೆಯಲಿದೆ. ದಕ್ಷಿಣ ಕನ್ನಡ ಉಡುಪಿ ಕುಂದಾಪುರ ಈ ಭಾಗಗಳಲ್ಲಿ ಗುಡುಗು ಸಹಿತ ಮಿಂಚು ಮಳೆ ಆಗಲಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ,ಕೊಡಗು,ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಜಿಲ್ಲೆಗಳಲ್ಲಿ ಗುಡುಗು ಸಹಿತ ಅಲ್ಪ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರವು ಅವನ ಸೂಚನೆಯನ್ನು ಬಿತ್ತರಿಸಿದೆ ಹಾಗಾಗಿ ಬೆಂಗಳೂರು ಸೇರಿದಂತೆ ಹಲವೆಡೆ ವರುಣದೇವ ಬಿಸಿಲಿನ ಬೇಗೆಗೆ ತಂಪೆರವ ಎಲ್ಲಾ ಲಕ್ಷಣಗಳು ಇವೆ

ದಿನಾಂಕ 09/5/2023 ರಂದು ಹಾವೇರಿ ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆ ಬರುವ ಮುನ್ಸೂಚನೆ ಇದೆ.

ಯಾವ ತಿಂಗಳು ಎಷ್ಟು ಮಳೆ ಸುರಿಯಲಿದೆ?

ಈ ಜೂನ್‌ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ ದೀರ್ಘ ಕಾಲೀನ ಸರಾಸರಿಯ ಶೇ.96ರಷ್ಟು ಮಳೆ ಸುರಿಯಲಿದೆ. ಇದರಲ್ಲಿ ಶೇ.5ರಷ್ಟು ಹೆಚ್ಚ-ಕಡಿಮೆ ಕೂಡ ಆಗಬ ಹುದು, ದೇಶಾದ್ಯಂತ ಸರಾಸರಿ 87 ಸೆಂ.ಮೀ. ಮಳೆ ಈ ಸಲ ಸುರಿಯಲಿದೆ’ ಎಂದು ಮುನ್ನೂ ಚನೆಯ ಘೋಷಣೆ ಮಾಡಿದ ಭೂವಿಜ್ಞಾನ ಕಾರ್ಯದರ್ಶಿ ಎಂ. ರವಿಚಂದ್ರನ್‌ ಹೇಳಿದರು. ಅದೇ ರೀತಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ ಆಗುವ ಸಾಧ್ಯತೆ ಶೇ. 67ರಷ್ಟಿದೆ. ದಕ್ಷಿಣಭಾರತ, ಪೂರ್ವ-ಮಧ ಭಾರತ, ವಾಯವ್ಯ ಭಾರತ ಹಾಗೂ ಈಶಾನ್ಯ ಭಾರತದ ಹಲವಾರು ಭಾಗಗಳಲ್ಲಿ ವಾಡಿಕೆಯ ಮಳೆ ಬೀಳಲಿದೆ. ಪಶ್ಚಿಮ ಮಧ್ಯ ಭಾರತ, ವಾಯವ್ಯ ಭಾರತ ಹಾಗೂ ಈಶಾನ್ಯ ಭಾರತದ ಸ್ಥಿತ್ಯಂತರದ ಕೆಲವೆಡೆ ಮಾತ್ರ ವಾಡಿಕೆಗಿಂತ ಕಡಿಮೆ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಸಂಸ್ಥೆ ಮಹಾ ನಿರ್ದೇಶಕ ಎಂ. ಮೊಹಾಪಾತ್ರ ನುಡಿದರು.

ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ?

ಮುಂಬರುವ ದಿನಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ ಜಿಲ್ಲೆ, ತುಮಕೂರಿನ ಮಧ್ಯ ಹಾಗೂ ಪೂರ್ವ ಭಾಗದ ತಾಲೂಕುಗಳು, ರಾಮನಗರದ ಮಧ್ಯಭಾಗ, ಕೊಪ್ಪಳದ ಪೂರ್ವ ಭಾಗ,
ಇನ್ನೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಇದರೊಂದಿಗೆ ಜಿಲ್ಲಾಧಿಕಾರಿಗಳಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ರೈತರು ಸ್ವಲ್ಪ ಹವಾಮಾನ ಬದಲಾವಣೆ ಕಡೆ ಗಮನ ಹರಿಸಿ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಹವಾಮಾನ ಬದಲಾವಣೆ ನೋಡಿಕೊಂಡು ಕೆಲಸದಲ್ಲಿ ನಿರತರಾಗಬೇಕು. ಕಟಾವು ಮಾಡಿದ ಬೆಳೆಗಳನ್ನು ಸಂರಕ್ಷಿಸಬೇಕು. ದನಗಳಿಗೆ ಮೇವು ಹಾಗೂ ಇತರೆ ಕೃಷಿ ಚಟುವಟಿಕೆಗಳ ಕಡೆಗೆ ಗಮನ ಹರಿಸಿ ಹವಾಮಾನ ಬದಲಾವಣೆ ವಿಕೋಪದಿಂದ ಪಾರಾಗಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಲೇಖಕರು: ಮದನ್ ಎಂ ಪಿ

ಕೃಷಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ..

ಹೆಚ್ಚಿನ ಮಾಹಿತಿಗಾಗಿ ಕೃಷಿ ವಾಹಿನಿ ಜಾಲತಾಣದ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿರಿ

https://chat.whatsapp.com/K9mNNO3T6FzKJGch4oqd2m

Leave a Reply

Your email address will not be published. Required fields are marked *