Fruits id- ಈ ಕೆಲಸ ಮಾಡಿದರೆ ಮಾತ್ರ ಬೆಳೆ ವಿಮೆ ಮತ್ತು ಬೆಳೆ ಹಾನಿ ಹಣ ಖಾತೆಗೆ ಬರುತ್ತದೆ.

ಈ ಕೆಲಸ ಮಾಡಿದರೆ ಮಾತ್ರ ಬೆಳೆವಿಮೆ ಬೆಳೆಹಾನಿ ಪರಿಹಾರ ನಿಮ್ಮ ಖಾತೆಗೆ ಜಮೆ ಯಾಗುತ್ತವೆ..

ಬರ ಪರಿಹಾರದ ಹಣ ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್‌ಐಡಿ ಮಾಡಿಸಲೇಬೇಕು. ಒಂದು ವೇಳೆ ಎಫ್‌ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್‌ಐಡಿ ಮಾಡದೆ ಇರುವ ಕೂಡಲೇ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್‌ಐಡಿ ಮಾಡಿಸಬೇಕು.

ಈವರೆಗೆ ಎಫ್‌ಐಡಿ ಮಾಡಿಸದೇ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್‌ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.

ಆಧಾರ್ ನಂಬರ್ ಹಾಕಿ ನಿಮ್ಮ FID ತಿಳಿದುಕೊಳ್ಳಿ

ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ.

ನಿಮ್ಮ FID ವಿವರ ಅಲ್ಲಿ ಸಿಗುತ್ತದೆ.

FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣಿ ಮಾಡುವುದು ಹೇಗೆ?

ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇಸ್ಲಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.

ಏನಿದು ಫ್ರಟ್ಸ್ ನಂಬರ್?

ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID(ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ಎಲ್ಲಾ ವಿವರವನ್ನು ಒಳಗೊಂಡಿರುವ ಸಾಧಾನವಾಗಿದೆ. ಸರ್ಕಾರದಿಂದ ದೊರೆಯುವ ಎಲ್ಲಾ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕರು ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.

ನೋಂದಣಿ ಹೇಗೆ? ಇಲ್ಲಿ ನೋಡಿರಿ

ನಿಮ್ಮ ಹತ್ತಿರದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳಲ್ಲಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟ್ರೀಕೃತ ಬ್ಯಾಂಕ್‌ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ, ಮೊಬೈಲ್ ನಂಬರ್

ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.

ಏಕೆ ನೋಂದಾಯಿಸಬೇಕು?

ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರಟ್ಸ್ ಪೋರ್ಟಲ್ ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ.

ನಿಮ್ಮ ಮೊಬೈಲ್ ನಲ್ಲೇ FID ನೊಂದಣಿ ಮಾಡುವುದು ಹೇಗೆ?

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ https://fruits.karnataka.gov.in/OnlineUserLogin.aspx

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.”Citizen Registration” ಮೇಲೆ ಕ್ಲಿಕ್ ಮಾಡಿ.

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,l agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.

ನಂತರ ನಿಮ್ಮ ಮೊಬೈಲ್ ನಂಬರ್, ಇಮೇಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ.

ನಂತರ ನಿಮ್ಮ ಮೊಬೈಲ್ ಗೆ ಬಂದಿರುವ ಒಟಿಪಿ OTP ಅನ್ನು ಅಲ್ಲಿ ಹಾಕಿ, ನಂತರ Submit ಮೇಲೆ ಕ್ಲಿಕ್ ಮಾಡಬೇಕು.

ನಂತರ ನೀವು Password create ಮಾಡಿಕೊಂಡು ಮುಂದೆ ಲಾಗಿನ್ ಆಗಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿದರೆ ನಿಮ್ಮ FID (ಫ್ರೂಟ್ಸ್ ಐ ಡಿ ) ನಿಮಗೆ ಸಿಗಲಿದೆ.

ಹೀಗೆ ಬಂದಿರುವ FID ಯನ್ನು ಕೃಷಿ ಇಲಾಖೆ,ರೇಷ್ಮೆ, ಅಥವಾ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ನಂತರ FID ಯನ್ನು ಪಿ ಎಂ ಕಿಸಾನ್ ಯೋಜನೆ, ಬೆಳೆಸಾಲ, ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ನೀವು ಈ FID ಅನ್ನು ಬಳಸಬಹುದು.(Source:- Krushirushi 🌱💚)

ರಾಜ್ಯಕ್ಕೆ 42 ಕೋಟಿ ರೂಪಾಯಿ ಬೆಳೆವಿಮೆ
ಈ ಜಿಲ್ಲೆಗೆ ಸಿಂಹಪಾಲು 34.99 ಕೋಟಿ ಬಿಡುಗಡೆ

ಗದಗ ಜಿಲ್ಲೆಗೆ ಸಿಂಹಪಾಲು:-
ಗದಗ: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಹೆಸರು ಬೆಳೆ ನಾಶವಾಗಿದ್ದು, 42 ಕೋಟಿ ರೂ. ವಿಮೆ ನೀಡಲು ಖಾಸಗಿ ವಿಮೆ ಕಂಪನಿ ಒಪ್ಪಿಕೊಂಡಿದೆ. ಅದರಲ್ಲಿ ಗದಗ ಜಿಲ್ಲೆಗೆ ಸಿಂಹಪಾಲು 34.99 ಕೋಟಿ ರೂ. ದೊರೆತಿದೆ. ಪ್ರಸಕ್ತ ಮುಂಗಾರು ಆರಂಭದಲ್ಲಿ ಕೆಲವೆಡೆ ಹೆಸರು ಬಿತ್ತನೆ ಜರುಗಿತ್ತು. ಆದರೆ, ಸಕಾಲಕ್ಕೆ ಮಳೆಯಾಗದ ಕಾರಣ ಕೃಷಿ ಇಲಾಖೆಯ ಬಿತ್ತನೆ ಗುರಿ ಸಾಧ್ಯವಾಗಿರಲಿಲ್ಲ. ಬಿತ್ತಿದ ಬೆಳೆಯೂ ನಾಶವಾಗಿದೆ. ಹೆಸರು ಬೆಳೆ ಪರಿಹಾರಕ್ಕೆ ರೈತ ಮುಖಂಡರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೈತ ಮುಖಂಡರು, ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ವಿಮೆ ಕಂಪನಿ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆದು, ಸಂಕಷ್ಟ ಸೂತ್ರದ ಮೂಲಕ ವಿಮೆ ಪರಿಹಾರ ಕಂಡುಕೊಳ್ಳಲಾಗಿದೆ. ಪ್ರತಿ ಹೆಕ್ಟೇ‌ ಗೆ ರೈತನ ಖಾತೆಗೆ ಸರಾಸರಿ 8312.5 ರೂ. ಗಳು ಜಮೆ ಆಗಲಿದೆ. ‘ಹೆಸರು ಬೆಳೆ ವಿಮೆಗೆ ಮಂಜೂರಾತಿಯ ಆಡಳಿತಾತ್ಮಕ ಪ್ರಕ್ರಿಯೆ ಮುಗಿದಿದ್ದು, ಸದ್ಯದಲ್ಲೆ ರೈತರ ಖಾತೆಗೆ ಜಮೆ ಆಗಲಿದೆ’ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಪ್ರತಿಕ್ರಿಯಿಸಿದ್ದಾರೆ.

ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ :-

ಈ ಕೆಳಗೆ ಕಾಣುವ ಲಿಂಕ್ ಮೇಲೆ ಒತ್ತಿ ನಿಮ್ಮ ಆಧಾರ ಸಂಖ್ಯೆಯನ್ನು ನಮೂದಿಸಿ ನಿಮಗೆ ಎಷ್ಟು ಬೆಳೆ ವಿಮೆ ಹಣ ಜಮೆಯಾಗಿರುವ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ.

https://samrakshane.karnataka.gov.in/Premium/CheckStatusMain_aadhaar.aspx

ನಿಮ್ಮ ಜಿಲ್ಲೆಯ ಇನ್ಸೂರೆನ್ಸ್(insurance) ಕಂಪನಿ ಯಾವುದು ಎಂದು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಯಾವ ಜಿಲ್ಲೆಗೆ ಯಾವ ಇನ್ಶೂರೆನ್ಸ್ ಕಂಪನಿ ಇರುವ ಬಗ್ಗೆ ಮಾಹಿತಿಯನ್ನು ನೀವು ತಿಳಿದುಕೊಳ್ಳಬಹುದು. https://samrakshane.karnataka.gov.in/HomePages/frmKnowYourInsCompany.aspx

ನೀವು ಯಾವ ಬೆಳೆಗೆ ಎಷ್ಟು ವಿಮೆಯನ್ನು ಕಟ್ಟಬೇಕು ಎಂದು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ತಿಳಿಯುತ್ತದೆ.

https://samrakshane.karnataka.gov.in/Premium/Crops_You_Can_Insure.aspx

ಈ ಕೆಳಗಿನ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆಯ ತಾಲೂಕು ಹೋಬಳಿ ಮತ್ತು ಹಳ್ಳಿಯನ್ನು ಆಯ್ಕೆ ಮಾಡಿಕೊಂಡು display ಮೇಲೆ ಒತ್ತಬೇಕು. ನಂತರ ನೀವು ಯಾವ ಬೆಳೆಗೆ ಎಷ್ಟು ವಿಮೆ ಕಟ್ಟಬೇಕು ಎಂಬುದು ಅಲ್ಲಿ ಬರುತ್ತದೆ..

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/IdgrNNJ7davJ82ndmV12M1

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. Fruits id, ಹಾಗೂ ಬೆಳೆ ವಿಮೆ ಬೆಳೆ ಹಾನಿ ಪರಿಹಾರ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

ತಪ್ಪದೆ ಓದಿರಿ :-

➡️ ಕೃಷಿ ಪಂಪ್ಸೆಟ್ ಗಳಿಗೆ ಐದು ತಾಸು ವಿದ್ಯುತ್ ಪೂರೈಕೆ ಮಾಡಬೇಕೆಂದು ಸಿಎಂ ಖಡಕ್ ವಾರ್ನಿಂಗ್ https://krushivahini.com/2023/10/14/continuous-5-hour-power-supply/

➡️ ಪಿ ಎಂ ಕಿಸಾನ್ ಯೋಜನೆಯ ಹಣ ಹೆಚ್ಚಳ ಯಾರಿಗೆ ಎಷ್ಟು ಹಣ ಸಿಗುತ್ತದೆ ಈ ಕೆಲಸ ಮಾಡಿದವರಿಗೆ ಮಾತ್ರ ಹಣ https://krushivahini.com/2023/10/14/pm-kisan-yojana-money-increased/

➡️ 216 ತಾಲೂಕುಗಳನ್ನು ಅಧಿಕೃತವಾಗಿ ಬರಪೀಡಿತ ಎಂದು ಘೋಷಿಸಿದ ಸಿಎಂ ಸಿದ್ದರಾಮಯ್ಯ ನಿಮ್ಮ ತಾಲೂಕು ಇದೆಯೇ ಚೆಕ್ ಮಾಡಿಕೊಳ್ಳಿ https://krushivahini.com/2023/10/13/baragala-talukugalu/

➡️ ಬರ ಘೋಷಿತ ರೈತರಿಗೆ ಸಾಲದ ಬಗ್ಗೆ ಒಳ್ಳೆಯ ಸುದ್ದಿ ಕೊಟ್ಟ ರಾಜ್ಯ ಸರ್ಕಾರ ತಪ್ಪದೇ ನೋಡಿ https://krushivahini.com/2023/10/11/crop-loan-repayment-for-drought-declared-farmers/

➡️ ಅನುಗ್ರಹ ಯೋಜನೆಯಡಿ ಮರಣ ಹೊಂದಿದ ಜಾನುವಾರುಗಳಿಗೆ 10000/- ಹಣ ಘೋಷಣೆ https://krushivahini.com/2023/10/12/anugraha-yojana-subsidy/

➡️ ಇನ್ನು ಮುಂದೆ ನಿಮ್ಮ ಹೊಲದ ಪಹಣಿಯ ಜೊತೆ ಹೊಲದ ನಕ್ಷೆಯನ್ನು ವಿತರಿಸಲಾಗುತ್ತದೆ https://krushivahini.com/2023/10/11/distribution-of-pahani-with-land-survey-map/

One thought on “Fruits id”

Leave a Reply

Your email address will not be published. Required fields are marked *