Free electricity

Sala manna – ಬರಗಾಲ ಘೋಷಿತ ತಾಲೂಕಿನ ರೈತರಿಗೆ ಸಾಲ ಮನ್ನಾ ಬಗ್ಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ..

ಬರ ಮತ್ತು ಬೆಳೆ ನಷ್ಟದಿಂದಾಗಿ ರೈತರು ಎದುರಿಸುತ್ತಿರುವ ಕಷ್ಟಗಳನ್ನು ನಿವಾರಿಸುವ ಮಹತ್ವದ ಕ್ರಮದಲ್ಲಿ, ರಾಜ್ಯ ಸರ್ಕಾರವು ಹೆಚ್ಚು ಅಗತ್ಯವಿರುವ ಪರಿಹಾರ(ಸಾಲ ಮನ್ನಾ) ಯೋಜನೆಯೊಂದಿಗೆ ಮುಂದೆ ಬಂದಿದೆ. ಈ ಲೇಖನದಲ್ಲಿ ಅದರ ಬಗ್ಗೆ ಮಾಹಿತಿ ನೀಡಲಾಗಿದೆ, ಅಲ್ಲಿ ಮುಖ್ಯಮಂತ್ರಿಗಳು ಸಾಲಗಳನ್ನು ವಸೂಲಿ ಮಾಡದಂತೆ ಬ್ಯಾಂಕುಗಳಿಗೆ ಸೂಚನೆ ನೀಡಿದ್ದಾರೆ, ಇದು ರೈತ ಸಮುದಾಯಕ್ಕೆ ಸ್ವಲ್ಪ ನೆಮ್ಮದಿ ನೀಡುತ್ತದೆ.

ಬೆಳೆ ನಷ್ಟವನ್ನು ಎದುರಿಸಿ ಜೊತೆಗೆ ಸಾಲವನ್ನು ತೀರಿಸಲಾಗದೆ ಕಷ್ಟದ ಪರಿಸ್ಥಿತಿ ಎದುರಿಸುವ ಪರಿಸ್ಥಿತಿ ಬಂದಿದೆ. ಸರ್ಕಾರ ಈಗಾಗಲೇ ರಾಜ್ಯದ ಹಲವು ತಾಲೂಕುಗಳನ್ನ ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿದೆ. ಇದೀಗ ಅನ್ನದಾತ ರೈತನಿಗೆ ನೆರವಾಗುವ ಹಿನ್ನೆಲೆಯಲ್ಲಿ ಇಂದು ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದಲ್ಲಿ ಬ್ಯಾಕರಗಳ ವಿಶೇಷ ಸಭೆ ನಡೆಯಿತು.

ರೈತರ ಬೆಳೆ ಸಾಲಗಳ ಮರುರಚನೆಗೆ ತೀರ್ಮಾನ:-

ಎಲ್ಲಾ ಬ್ಯಾಂಕುಗಳು ಆರ್‌ಬಿಐಗೆ‌(RBI) ಸಭೆಯ ನಡವಳಿ ಸಹಿತ ಸೂಚನೆಯನ್ನು ಈಗಾಗಲೇ ಕಳುಹಿಸಲಾಗಿದೆ. ಪರಿಹಾರ ಸಂದರ್ಭದಲ್ಲಿ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚನೆ ನೀಡುವುದಾಗಿ ರಾಜ್ಯಮಟ್ಟದ ಬ್ಯಾಂಕ್‌ಗಳ ಸಮಿತಿ ಉಸ್ತುವಾರಿ ಸಂಚಾಲಕರಾದ ಬಿ ಪಾರ್ಶ್ವನಾಥ್ ಅವರು ತಿಳಿಸಿದ್ದಾರೆ.

ಬರ ಪರಿಹಾರ: ರೈತರ ಬೆಳೆ ಸಾಲಗಳ ಪುನರ್ ರಚಿಸುವಂತೆ ಎಲ್ಲಾ ಬ್ಯಾಂಕ್ ಗಳಿಗೆ ಸರ್ಕಾರ ಸೂಚನೆ

ಬರಗಾಲದಿಂದ ರೈತರು ಅನುಭವಿಸುತ್ತಿರುವ ನಷ್ಟವನ್ನು ಗಮನದಲ್ಲಿಟ್ಟುಕೊಂಡು ರೈತರ ಸಾಲ ಪುನರ್ ರಚಿಸುವಂತೆ ಎಲ್ಲ ಬ್ಯಾಂಕ್‌ಗಳಿಗೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.

ಬೆಂಗಳೂರು: ಬರಗಾಲದಿಂದ ರೈತರು ಅನುಭವಿಸುತ್ತಿರುವ ನಷ್ಟವನ್ನು ಗಮನದಲ್ಲಿಟ್ಟುಕೊಂಡು ರೈತರ ಸಾಲ ಪುನರ್ ರಚಿಸುವಂತೆ ಎಲ್ಲ ಬ್ಯಾಂಕ್‌ಗಳಿಗೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.

* ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿಯ (ಎಸ್‌ಎಲ್‌ಬಿಸಿ) ವಿಶೇಷ ಸಭೆಯಲ್ಲಿ ಸರ್ಕಾರ ಸೂಚನೆ ನೀಡಿದೆ:-

ಕರ್ನಾಟಕದ ಎಸ್‌ಎಲ್‌ಬಿಸಿಯ ಉಸ್ತುವಾರಿ ಸಂಚಾಲಕ ಬಿ ಪಾರ್ಶ್ವನಾಥ್ ಅವರು ಮಾತನಾಡಿ, ರಾಜ್ಯದ ಎಲ್ಲಾ ಬ್ಯಾಂಕ್‌ಗಳ ಮುಖ್ಯಸ್ಥರು ಮತ್ತು ಪ್ರಮುಖ ಜಿಲ್ಲಾ ವ್ಯವಸ್ಥಾಪಕರಿಗೆ ಸುತ್ತೋಲೆಗಳನ್ನು ಹೊರಡಿಸಲಾಗಿದೆ.

ಬರ ಪೀಡಿತ ಪ್ರದೇಶಗಳ ರೈತರಿಗೆ ಬ್ಯಾಂಕ್‌ಗಳು ನೀಡುವ ವಿವಿಧ ಪರಿಹಾರ ಕ್ರಮಗಳ ಕುರಿತು ಚರ್ಚಿಸಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಅವರು ಸಭೆಯನ್ನು ಕರೆದಿದ್ದರು.

ಯಾರಿಗೆಲ್ಲಾ ಸಾಲ ಮನ್ನಾ ಆಗಿದೆ ಎಂದು ಚೆಕ್ ಮಾಡಿಕೊಳ್ಳಿರಿ :-

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.. 👇🏻

https://mahitikanaja.karnataka.gov.in/department

ನಂತರ ಅಲ್ಲಿ ಕಾಣುವ “ಕಂದಾಯ ಇಲಾಖೆಯ” ಮೇಲೆ ಕ್ಲಿಕ್ ಮಾಡಬೇಕು..

ನಂತರ ಕಂದಾಯ ಇಲಾಖೆ ಸೇವೆಗಳು ಇದರ ಮೇಲೆ ಕ್ಲಿಕ್ ಮಾಡಿ

ನಂತರ ಅಲ್ಲಿ ಕಾಣುವ ವಾಣಿಜ್ಯ ಬ್ಯಾಂಕಿನ ಸಾಲ ಮನ್ನಾ ಚೆಕ್ ಮಾಡಲು ‘loan waiver report for commercial bank’ ಇದರ ಮೇಲೆ ಕ್ಲಿಕ್ ಮಾಡಬೇಕು. ಹಾಗೂ ಸೊಸೈಟಿಯಲ್ಲಿನ ಸಾಲವನ್ನು ಚೆಕ್ ಮಾಡಲು ‘ loan waiver report for primary agricultural cooperative societies” ಮೇಲೆ ಕ್ಲಿಕ್ ಮಾಡಿರಿ.

ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ.

ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆ ಎಷ್ಟು ಸಾಲಮನ್ನಾ ಆಗಿದೆ ಎಂಬುದನ್ನು ಚೆಕ್ ಮಾಡಬಹುದು. Search button ಅಲ್ಲಿ ನಿಮ್ಮ ನಿಮ್ಮ ಹೆಸರನ್ನು ಹಾಕಿದರೆ ಅಲ್ಲಿ ಮಾಹಿತಿಯನ್ನು ತೋರಿಸುತ್ತದೆ.

ಬಹಳಷ್ಟು ರೈತರಿಗೆ ಅವರ ಸಾಲ ಮನ್ನಾ ಆಗಿಲ್ಲ ಎಂದು ಹೇಳುತ್ತಾರೆ ಆದರೆ ಸಾಲ ಮನ್ನಾ ಮಾಡಲು ಕೆಲವು ದಾಖಲೆ ಮತ್ತು ಅರ್ಹತೆಗಳು ಮುಖ್ಯ,

ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಸಾಲ ಮನ್ನಾ ಆಗಲು ಬೇಕಾದ ದಾಖಲಾತಿಗಳು ಹಾಗೂ ಅರ್ಹತೆಗಳನ್ನು ಇಲ್ಲಿ ನೋಡಿ.

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಸಾಲ ಮನ್ನಾ ಆಗಲು ಬೇಕಾದ ಅರ್ಹತೆ ಹಾಗೂ ದಾಖಲಾತಿಗಳನ್ನು ನೋಡಬಹುದು. 👇🏻

https://mahitikanaja.karnataka.gov.in/department

ನಂತರ ಅಲ್ಲಿ ಕಾಣುವ “ಕಂದಾಯ ಇಲಾಖೆಯ” ಮೇಲೆ ಕ್ಲಿಕ್ ಮಾಡಬೇಕು..

ನಂತರ ಕಂದಾಯ ಇಲಾಖೆ ಸೇವೆಗಳು ಇದರ ಮೇಲೆ ಕ್ಲಿಕ್ ಮಾಡಿ

ನಂತರ clws ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ

ನಂತರ ಮುಂದಿನ ಮುಖಪುಟದಲ್ಲಿ ಕಾಣುವ ನಿಮ್ಮ ಜಿಲ್ಲೆ, ಮತ್ತು ಬ್ಯಾಂಕ್ ಸೆಲೆಕ್ಟ್ ಮಾಡಿ, ಸಲ್ಲಿಸು ಮೇಲೆ ಕ್ಲಿಕ್ ಮಾಡಿ.

ನಂತರ ಈ ಕೆಳಗೆ ಸೂಚಿಸಿರುವ ಸಾಲ ಮನ್ನಾ ಅರ್ಹತೆ ಹಾಗೂ ದಾಖಲೆಗಳನ್ನು ನೀವು ನೋಡಬಹುದು.ಹಾಗೂ ಸಾಲ ಮನ್ನಾ ಸ್ಥಿತಿ ಗತಿ ಯನ್ನು ಅಲ್ಲಿ ಕಾಣುತ್ತಿರಿ.

ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ.ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/IdgrNNJ7davJ82ndmV12M1

ರೈತರ ಸಾಲ ಮರುಪಾವತಿ:-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ರೈತರ ಸಾಲ ಮರುಪಾವತಿ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

ತಪ್ಪದೆ ಓದಿರಿ :-

➡️ ಸರಿಯಾಗಿ ವಿದ್ಯುತ್ ಕೊಡುತ್ತಿಲ್ಲ?? ಮಧ್ಯಂತರ ಬೆಳೆ ವಿಮೆ ಬಿಡುಗಡೆ ಇಲ್ಲ??? ಬರ ಪರಿಹಾರ ಯಾವಾಗ ಬರುತ್ತದೆ https://krushivahini.com/2023/10/23/karnataka-drought-news/

➡️ ಬೆಳೆ ವಿಮೆ ಹಣ ನಿಮ್ಮ ಖಾತೆಗೆ ಎಷ್ಟು ಜಮೆಯಾಗಬಹುದು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ https://krushivahini.com/2023/10/22/bele-vime/

➡️ ಶೀಘ್ರದಲ್ಲಿ ಬರ ಪರಿಹಾರ ಬಿಡುಗಡೆ ಸಚಿವ ಕೃಷ್ಣ ಬೈರೇಗೌಡ ಭರವಸೆ.. ಇಲ್ಲಿದೆ ಮಹತ್ವದ ಮಾಹಿತಿ 👇🏻
https://krushivahini.com/2023/10/21/bara-parihara/

➡️ ದಿಡೀರ್ ಏರಿಕೆ ಕಂಡ ಈರುಳ್ಳಿ 💸🧅ಬೆಲೆ ಮಾರುಕಟ್ಟೆಯಲ್ಲಿ ಈರುಳ್ಳಿಯ ರೇಟ್ ಎಷ್ಟಿದೆ ಇಲ್ಲಿ ನೋಡಿ.. 👇🏻
https://krushivahini.com/2023/10/20/bumper-price-for-onion-in-karnataka/

✅💸 ಸದ್ಯದಲ್ಲೇ 27 ಲಕ್ಷ ರೈತರಿಗೆ ಬರ ಪರಿಹಾರ ಹಣ ಕೊಡುವುದಾಗಿ ಹೇಳಿದ ಸರ್ಕಾರ!
➡️ ಎಕರೆಗೆ 9,423 ರೂ ಬರ ಪರಿಹಾರ
➡️ ಬೆಳೆ ಪರಿಹಾರ ಹಣವನ್ನು ರೈತರು ಪಡೆಯುವುದು ಹೇಗೆ??https://krushivahini.com/2023/10/19/drought-relief/

➡️ಈ ಜಿಲ್ಲೆಯಿಂದ ಸರ್ಕಾರಕ್ಕೆ 212.11 ಕೋಟಿ ಪರಿಹಾರ ಕೊಡುವುದಾಗಿ ಪ್ರಸ್ತಾವನೆ https://krushivahini.com/2023/10/18/212-11-crore-compensation-proposal-to-govt/

➡️ ತಡವಾಗಿ ನೋಂದಣಿ ಆದರೂ ಕೂಡ ಗೃಹಲಕ್ಷ್ಮಿ ಯೋಜನೆ ಹಣ ಖಾತೆಗೆ ಜಮೆ ಯಾಗಿದೆ.. https://krushivahini.com/2023/10/18/gruhalakshmi-yojana/

➡️ ಹಿಂಗಾರು ಬೆಳೆ ವಿಮೆ 2023 ಯಾವ ಬೆಳೆಗೆ ಎಷ್ಟು ವಿಮೆ ಕಟ್ಟಬೇಕು? ಅರ್ಜಿ ಎಲ್ಲಿ ಸಲ್ಲಿಸಬೇಕು https://krushivahini.com/2023/10/18/rabi-crop-insurance-2023/

➡️ ಗೃಹಜೋತಿ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್ ಹೆಚ್ಚು ವಿದ್ಯುತ್ ಹಣ ಬರುತ್ತಿದೆ https://krushivahini.com/2023/10/17/free-electricity/

One thought on “Sala manna- ಸಾಲ ಮನ್ನಾ ಬಗ್ಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ”

Leave a Reply

Your email address will not be published. Required fields are marked *