Bara parihara :-
ಚಾಮರಾಜನಗರ: ‘ಬರ ಪರಿಹಾರ ಕೊಡಬೇಕಾಗಿರುವುದು ಕೇಂದ್ರ ಸರ್ಕಾರದ ಕೆಲಸ. ಕೇಳುವುದು ನಮ್ಮ ಹಕ್ಕು, ಬರ ಪರಿಹಾರ ಕೇಳಲು ಕೇಂದ್ರ ಗೃಹ ಹಾಗೂ ಕೃಷಿ ಸಚಿವರನ್ನು ಸೆ.23 ರಿಂದ ಭೇಟಿಗೆ ಅವಕಾಶ ಕೇಳುತ್ತಿದ್ದೇವೆ. ಆದರೆ, ಇಲ್ಲಿಯವರೆಗೂ ಭೇಟಿಗೆ ಅವಕಾಶವನ್ನೇ ನೀಡಿಲ್ಲ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಶನಿವಾರ ದೂರಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ನಮ್ಮ ಅಧಿಕಾರಿಗಳು ನಿತ್ಯ ಕೇಂದ್ರ ಸಚಿವರ ಕಚೇರಿಗೆ ಕರೆ ಮಾಡುತ್ತಿದ್ದಾರೆ. ನಾನೂ ಪತ್ರ ಬರೆದು ಕಾಲಾವಕಾಶ ಕೇಳಿದ್ದೇನೆ. ಆದರೂ ಅವಕಾಶ ಸಿಕ್ಕಿಲ್ಲ. ಮುಂದಿನ ವಾರ ದೆಹಲಿಗೆ ಹೋಗಿ ಅಲ್ಲೇ ಕುಳಿತು ಭೇಟಿ ಮಾಡುವ ಪ್ರಯತ್ನ ಮಾಡುತ್ತೇನೆ’ ಎಂದರು.
ಹಿಂದೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ 236 ತಾಲೂಕುಗಳ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತವೆಂದು ಒಟ್ಟು 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿತ್ತು.
ಈ ಫೈಕಿ 22 ಸಾಧಾರಣ ಬರಪೀಡಿತ ತಾಲೂಕುಗಳಲ್ಲಿ ಮತ್ತೊಮ್ಮೆ ಬೆಳೆ ಹಾನಿ ಸಮೀಕ್ಷೆ ನಡೆಸಿ ಜಿಲ್ಲಾಧಿಕಾರಿಗಳು ನೀಡಿರುವ ವರದಿಯನ್ವಯ 11 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 11 ಸಾಧಾರಣ ಬರಪೀಡಿತ ತಾಲೂಕುಗಳೆಂದು ನಿರ್ಧರಿಸಲಾಗಿದೆ.
ಒಟ್ಟಾರೆ ಕೇಂದ್ರ ಸರ್ಕಾರದ ಬರ ನಿರ್ವಹಣೆ 2020ರ ಮಾರ್ಗಸೂಚಿಯಂತೆ 189 ತೀವ್ರ ಬರಪೀಡಿತ ತಾಲೂಕು ಹಾಗೂ 27 ಸಾಧಾರಣ ಬರಪೀಡಿತ ತಾಲೂಕುಗಳು ಒಳಗೊಂಡಂತೆ ಒಟ್ಟು 216 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ ಆದೇಶಿಸಲಾಗಿದೆ.
ಬರಪೀಡಿತ ತಾಲೂಕಗಳ ಪಟ್ಟಿ..
‘ರಾಜ್ಯದ 216 ತಾಲ್ಲೂಕುಗಳು ಬರಪೀಡಿತ ಘೋಷಣೆ ಎಂದು ಆಗಿದೆ. ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದೇವೆ. ವರದಿ ಬಗ್ಗೆ ಶೀಘ್ರ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಬೇಕು. ಬರ ಪರಿಹಾರ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯವೂ ಹೌದು. ನಮ್ಮ ಹಕ್ಕಿನ ಪ್ರಕಾರ, ಎನ್ ಡಿ ಆರ್ ಎಫ್ ಪರಿಹಾರ ರಾಜ್ಯಕ್ಕೆ ಕೊಡಲೇಬೇಕು’ ಎಂದರು.
‘ಬೇರೆ ರಾಜ್ಯಗಳಿಗೆ ಕೊಟ್ಟಂತೆ ನಮ್ಮ ರಾಜ್ಯಕ್ಕೂ ಕೊಡಬೇಕಾಗಿದ್ದು ಕೇಂದ್ರದ ಕರ್ತವ್ಯ. ನಮಗೆ ಬರಬೇಕಾದ ಅನುದಾನ ಬಿಟ್ಟು ಹೆಚ್ಚುವರಿ ನಿರೀಕ್ಷೆ ಮಾಡುತ್ತಿಲ್ಲ. ನೀತಿ ನಿಯಮಗಳ ಪ್ರಕಾರ ಅನುದಾನ ಕೊಡಲೇಬೇಕು’ ಎಂದು ಸಚಿವರು ಹೇಳಿದರು.
‘ಇ-ಆಫೀಸ್ ಯೋಜನೆಯನ್ನು ತಾಲ್ಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು. ಇದರಿಂದ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಬೇಗ ವಿಲೇವಾರಿಯಾಗುತ್ತವೆ’ ಎಂದರು.
ಕೃಷಿ ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ🙏🏻. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ
https://chat.whatsapp.com/IdgrNNJ7davJ82ndmV12M1
ಬರ ಪರಿಹಾರ :-
ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬರ ಪರಿಹಾರ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.
➡️ ಮಳೆ ಮುನ್ಸೂಚನೆ :- ಮುಂದಿನ ದಿನಗಳಲ್ಲಿ ಈ ಜಿಲ್ಲೆಗಳಿಗೆ ಹೆಚ್ಚಿನ ಮಳೆಯ ಸಾಧ್ಯತೆ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ https://krushivahini.com/2023/10/24/karnataka-rain/
➡️ ಸರಿಯಾಗಿ ವಿದ್ಯುತ್ ಕೊಡುತ್ತಿಲ್ಲ?? ಮಧ್ಯಂತರ ಬೆಳೆ ವಿಮೆ ಬಿಡುಗಡೆ ಇಲ್ಲ??? ಬರ ಪರಿಹಾರ ಯಾವಾಗ ಬರುತ್ತದೆ https://krushivahini.com/2023/10/23/karnataka-drought-news/
➡️ ರೈತರ ಹೊಲದ ಕಾಲುದಾರಿ ಬಂಡಿದಾರಿ ಬಗ್ಗೆ ಸರ್ಕಾರದಿಂದ ಸಿಹಿಸುದ್ದಿ ನಿಮ್ಮ ಹೊಲದ ನಕ್ಷೆ ಇಲ್ಲಿ ಪಡೆಯಿರಿ👇🏻 https://krushivahini.com/2023/10/22/village-map/
➡️ ಬೆಳೆ ವಿಮೆ ಹಣ ನಿಮ್ಮ ಖಾತೆಗೆ ಎಷ್ಟು ಜಮೆಯಾಗಬಹುದು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ https://krushivahini.com/2023/10/22/bele-vime/
➡️ ಎನ್ ಡಿ ಆರ್ ಎಫ್ ನಿಂದ ಕೂಡಲೇ ರೈತರಿಗೆ ಬರ ಪರಿಹಾರ ಕೊಡಬೇಕು ಸಚಿವ ಕೃಷ್ಣ ಬೈರೇಗೌಡ https://krushivahini.com/2023/10/22/bara-parihara-news/
➡️ ನರೇಗಾ ಯೋಜನೆಯ ಅಡಿ ಹಣವನ್ನು ಹೆಚ್ಚಳ ಮಾಡಿದ ಸರ್ಕಾರ ಇಲ್ಲಿದೆ ಮಹತ್ವದ ಮಾಹಿತಿ https://krushivahini.com/2023/10/22/narega-amount-increased/
➡️ ಮಳೆ ಮುನ್ಸೂಚನೆ:- ಈ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ⛈️💚 https://krushivahini.com/2023/10/22/weather-report/
➡️ ಬರ ಪರಿಹಾರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ ಎಕರೆಗೆ 25,000 ಬೆಳೆ ಪರಿಹಾರ ಕೊಡುವಂತೆ ಪ್ರತಿಭಟನೆ 🙏🏻https://krushivahini.com/2023/10/21/drought-relief-protest/
ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ
jayakumarcsj@gmail.com