Drought relief released to this district :- ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆವರಿಸಿರುವ ಬರ ಪರಿಸ್ಥಿತಿ ನಿಭಾಯಿಸಲು ಜಿಲ್ಲೆಗೆ ರಾಜ್ಯ ಸರ್ಕಾರ 7.50 ಕೋಟಿ ಬಿಡುಗಡೆ ಮಾಡಿದೆ. ಬರದಿಂದ ಉಂಟಾಗುವ ಯಾವುದೇ ತುರ್ತು ಪರಿಸ್ಥಿತಿಯನ್ನು ತ್ವರಿತವಾಗಿ ನಿರ್ವಹಿಸಲು ಈ ಹಣ ಬಳಕೆ ಮಾಡುವಂತೆ ಸೂಚಿಸಿದೆ.

ರಾಜ್ಯದಲ್ಲಿ ಈವರೆಗೆ ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾದ 216 ತಾಲ್ಲೂಕುಗಳ ಪಟ್ಟಿಯಲ್ಲಿ ಕೊಡಗಿನ ಎಲ್ಲ 5 ತಾಲ್ಲೂಕುಗಳೂ ಸೇರಿವೆ. ಹೀಗಾಗಿ, ಇಡೀ ಕೊಡಗು ಜಿಲ್ಲೆ ಬರಪೀಡಿತವಾಗಿದ್ದು, ಶೇ 39.0ರಷ್ಟು ಮಳೆಯ ಕೊರತೆಯನ್ನು ಎದುರಿಸುತ್ತಿದೆ. ಸೆಪ್ಟೆಂಬರ್ ತಿಂಗಳೊಂದನ್ನು ಹೊರತುಪಡಿಸಿ ಉಳಿದೆಲ್ಲ ತಿಂಗಳುಗಳಲ್ಲಿ ಮಳೆ ಕೊರತೆ ಜಿಲ್ಲೆಯನ್ನು ಕಾಡಿದೆ. ಅದರಲ್ಲೂ ಹೆಚ್ಚು ಮಳೆ ಸುರಿಯಬೇಕಿದ್ದ ಜೂನ್‌ನಲ್ಲಿ ಶೇ 80.01 ಹಾಗೂ ಆಗಸ್ಟ್‌ ನಲ್ಲಿ ಶೇ 82.05ರಷ್ಟು ಮಳೆ ಕೊರತೆ ಉಂಟಾಗಿ, ತೀವ್ರ ಬರದ ಪರಿಸ್ಥಿತಿ ಉಂಟಾಗಿದೆ.

ನಿಮಗೆ ಇಲ್ಲಿಯವರೆಗೂ ಎಷ್ಟು ಬೆಳೆ ಹಾನಿ ಹಣ ಜಮೆಯಾಗಿದೆ ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻

➡️ ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..
https://landrecords.karnataka.gov.in/PariharaPayment/

ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ.

31 ಜಿಲ್ಲೆಗಳಿಗೆ 324 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಈ ಬಾರಿ 235 ತಾಲೂಕುಗಳ ಪೈಕಿ 216 ತಾಲೂಕುಗಳು ಬರ ಪೀಡಿತ ಅಂತ ರಾಜ್ಯ ಸರ್ಕಾರ (Karnataka Govt) ಘೋಷಣೆ ಮಾಡಿತ್ತು. ಆದರೆ ಈಗ ಮತ್ತೆ ಏಳು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ.

➡️ ಇಲ್ಲಿಯವರೆಗೂ ನಿಮಗೆ ಎಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ??

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (drought)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ..

ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಹಳ್ಳಿಯ ಬೆಳೆ ಹಾನಿ ಜಮೆ ಆಗಿರುವ ರೈತರ ಪಟ್ಟಿ ಕಾಣುತ್ತದೆ.

ಇದರಿಂದ ಮುಂಬರುವ ದಿನಗಳು ನಿಜಕ್ಕೂ ಕಷ್ಟದಾಯಕವಾಗಿರಲಿದೆ. ಈಗಾಗಲೇ ಮಳೆಗಾಲದಲ್ಲೇ ಅಂತರ್ಜಲದ ಮಟ್ಟವೂ ಕುಸಿದಿದೆ ಎಂದು ಭೂವಿಜ್ಞಾನಿಗಳು ಹೇಳಿರುವುದು ಆತಂಕ ಮೂಡಿಸಿದೆ. ಕೆಲವೇ ದಿನಗಳು ಇಲ್ಲವೇ ಕೆಲವೇ ತಿಂಗಳುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳು ನಿಚ್ಚಳವಾಗಿದೆ.

ಇದರ ಜತೆಗೆ, ಹಾರಂಗಿಯಲ್ಲೂ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೀಘ್ರದಲ್ಲೇ ನಾಲೆಗಳು ಬರಿದಾಗುವ ಸಾಧ್ಯತೆಗಳು ಹೆಚ್ಚಿವೆ. ನೀರಿನ ಒರತೆ ಕಡಿಮೆಯಾಗಿ ಮೇವಿನ ಕೊರತೆಯೂ ಎದುರಾಗುವ ಸಂಭವವಿದೆ.

➡️ ಯಾವ ಜಿಲ್ಲೆಗೆ ಎಷ್ಟು ಅನುದಾನ?

ಬೆಂಗಳೂರು ನಗರ- 7.50 ಕೋಟಿ.

ಬೆಂಗಳೂರು ಗ್ರಾಮಾಂತರ- 6 ಕೋಟಿ.

ರಾಮನಗರ-7.50 ಕೋಟಿ.

ಕೋಲಾರ – 9 ಕೋಟಿ.

ಚಿಕ್ಕಬಳ್ಳಾಪುರ- 9 ಕೋಟಿ.

ತುಮಕೂರು-15 ಕೋಟಿ.

ಚಿತ್ರದುರ್ಗ- 9 ಕೋಟಿ.

ದಾವಣಗೆರೆ- 9 ಕೋಟಿ.

ಚಾಮರಾಜನಗರ-7.50 ಕೋಟಿ

ಮೈಸೂರು – 13.50 ಕೋಟಿ.

ಮಂಡ್ಯ- 10.50 ಕೋಟಿ.

ಬಳ್ಳಾರಿ- 7.50 ಕೋಟಿ.

ಕೊಪ್ಪಳ- 10.50 ಕೋಟಿ.

ರಾಯಚೂರು- 9 ಕೋಟಿ.

ಕಲಬುರ್ಗಿ- 16.50 ಕೋಟಿ.

ಬೀದರ್- 4.50 ಕೋಟಿ.

ಬೆಳಗಾವಿ- 22.50 ಕೋಟಿ.

ಬಾಗಲಕೋಟೆ- 13.50 ಕೋಟಿ.

ವಿಜಯಪುರ- 18 ಕೋಟಿ.

ಗದಗ-10.50 ಕೋಟಿ.

ಹಾವೇರಿ-12 ಕೋಟಿ.

ಧಾರವಾಡ-12 ಕೋಟಿ.

ಶಿವಮೊಗ್ಗ-10.50 ಕೋಟಿ.

ಹಾಸನ- 12 ಕೋಟಿ.

ಚಿಕ್ಕಮಗಳೂರು-12 ಕೋಟಿ.

ಕೊಡಗು-7.50 ಕೋಟಿ.

ದಕ್ಷಿಣ ಕನ್ನಡ- 3 ಕೋಟಿ.

ಉಡುಪಿ- 4.50 ಕೋಟಿ.

ಉತ್ತರ ಕನ್ನಡ-16.50 ಕೋಟಿ.

ಯಾದಗಿರಿ-9 ಕೋಟಿ.

ವಿಜಯನಗರ-9 ಕೋಟಿ.

➡️ ಈ ಕೆಲಸ ಮಾಡಿದರೆ ಮಾತ್ರ ಬರ ಪರಿಹಾರ ಹಣ ನಿಮಗೆ ಜಮೆ ಆಗುತ್ತದೆ!👇🏻

ಬರ ಪರಿಹಾರದ ಹಣ ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್‌ಐಡಿ ಮಾಡಿಸಲೇಬೇಕು. ಒಂದು ವೇಳೆ ಎಫ್‌ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್‌ಐಡಿ ಮಾಡದೆ ಇರುವ ಕೂಡಲೇ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್‌ಐಡಿ ಮಾಡಿಸಬೇಕು.

ಆಧಾರ್ ನಂಬರ್ ಹಾಕಿ ನಿಮ್ಮ FID ತಿಳಿದುಕೊಳ್ಳಿ

ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ👇🏻
https://fruitspmk.karnataka.gov.in/MISReport/GetDetailsByAadhaar.aspx

ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಎಫ್ ಐ ಡಿ ಜನರೇಟ್ ಆಗಿರುವುದು ನಿಮಗೆ ಕಾಣುತ್ತದೆ…

ಈವರೆಗೆ ಎಫ್‌ಐಡಿ ಮಾಡಿಸದೇ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್‌ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.

ಈ ಎಲ್ಲ ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತಕ್ಕೆ ಸರ್ಕಾರ ಮುಂಚಿತವಾಗಿಯೇ ಹಣ ಬಿಡುಗಡೆ ಮಾಡಿದೆ. ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸ್ಪಷ್ಟವಾಗಿ ಸೂಚಿಸಿದೆ.

ಕುಡಿಯುವ ನೀರಿನ ಕೊರತೆ ಉಂಟಾಗುವ ಪ್ರದೇಶಗಳನ್ನು ಮೊದಲೇ ಗುರುತಿಸಬೇಕು. ಅಲ್ಲಿ ನೀರಿನ ಮೂಲವನ್ನು ಪತ್ತೆ ಹಚ್ಚಬೇಕು. ಕೊಳವೆ ಬಾವಿ ಅಥವಾ ಇತ್ಯಾದಿ ಮೂಲಗಳನ್ನು ಹುಡುಕಬೇಕು. ಅದಕ್ಕಾಗಿ ಪೂರ್ವ ಸಿದ್ಧತೆ ನಡೆಸಬೇಕು ಎಂದು ಹೇಳಿದೆ.

ಸರ್ಕಾರ ಜಿಲ್ಲೆಯ ಭೌಗೋಳಿಕ ವ್ಯಾಪ್ತಿ, ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಒಟ್ಟು 31 ಜಿಲ್ಲೆಗಳಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ (ಎಸ್‌ಡಿಆರ್‌ಎಫ್) 324 ಕೋಟಿ ಬಿಡುಗಡೆ ಮಾಡಿದೆ. ಜಿಲ್ಲಾಧಿಕಾರಿಗಳ ವೈಯಕ್ತಿಕ (ಪಿ.ಡಿ) ಖಾತೆಗಳಿಗೆ ಅನುದಾನ ಬಿಡುಗಡೆ ಮಾಡಿ ಕಂದಾಯ ಇಲಾಖೆಯು ಅಕ್ಟೋಬರ್ 31ರಂದು ಆದೇಶ ಹೊರಡಿಸಿದೆ. ಎಸ್‌ಡಿಆರ್‌ಎಫ್‌ ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಮಾರ್ಗಸೂಚಿಗಳ ಅನುಸಾರ ಈ ಮೊತ್ತವನ್ನು ಬಳಕೆ ಮಾಡುವಂತೆ ಸೂಚಿಸಿದೆ.

ಆಧಾರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಸರ್ಕಾರಿ ಯೋಜನೆಗಳಿಗೆ ಎಲ್ಲ ಮಾಹಿತಿಯನ್ನು ಪಡೆಯಲು ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ. ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/HLCYrALalJpLbeEMnLRyZB

ಬರ ಪರಿಹಾರ ಬಿಡುಗಡೆ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬರ ಪರಿಹಾರ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

> ರೈತರು ಬರ ಪರಿಹಾರ ಪಡೆಯಲು ಇಲ್ಲಿದೆ ಮಹತ್ವದ ಮಾಹಿತಿ 👇🏻👇🏻

➡️ ರೈತರಿಗೆ ಎಷ್ಟು ಎಕರೆಗೆ ಎಷ್ಟು ಬರ ಪರಿಹಾರ ಬರುತ್ತದೆ?? ನಿಮಗೆ ಬರ ಪರಿಹಾರ ಬೇಕೆಂದರೆ ಈ ಕೆಲಸವನ್ನು ತಪ್ಪದೇ ಮಾಡಿರಿ ನಿಮಗೆ 👇🏻 https://krushivahini.com/2023/11/08/this-work-is-mandatory-to-get-flood-relief/

➡️ ಜೋಳ ಬೆಳೆಯುವ ಬೆಳೆಗಾರರಿಗೆ ಬಂಪರ್ ಸುದ್ದಿ ಕ್ವಿಂಟಲ್ ಗೆ 8000 ಆದ ಜೋಳದ ಬೆಲೆ https://krushivahini.com/2023/11/07/jowar-price-increased-by-rs-8000-per-quintal/

Leave a Reply

Your email address will not be published. Required fields are marked *