Interim Crop loss Proposal :- ತೊಗರಿ ಬೆಳೆ ನಷ್ಟ; ಶೇ 25ರಷ್ಟು ಮಧ್ಯಂತರ ಪರಿಹಾರಕ್ಕೆ ಶಿಫಾರಸ್ಸು

ಕಲಬುರಗಿ, ನವೆಂಬರ್ : ಕಲಬುರಗಿ ಜಿಲ್ಲೆಯಾದ್ಯಂತ ಜೂನ್, ಆಗಸ್ಟ್ ಮತ್ತು ಅಕ್ಟೋಬರ್‌ನಲ್ಲಿ ಮಳೆಯ ಕೊರತೆ ಕಂಡುಬಂದಿದೆ. ಇದರಿಂದಾಗಿ ತೊಗರಿ ಬೆಳೆ ನಷ್ಟವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಹಾರಕ್ಕಾಗಿ ಸರ್ಕಾರದ ಮೊರೆ ಹೋಗಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯ್ ತರನ್ನುಮ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಕುಂದು ಕೊರತೆ ಪರಿಹಾರ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಕೃಷಿ ಉನಿರ್ದೇಶಕ ಸೋಮಶೇಖರ ಬಿರಾದಾರ, ತೋಟಗಾರಿಕೆ ಉಪನಿರ್ದೇಶಕ ಸಂತೋಷ ಇನಾಂದಾರ, ಲೀಡ್ ಬ್ಯಾಂಕ್ ಮಾನ್ಯೇಜರ್ ಸದಾಶಿವ ರಾತ್ರಿಕರ್, ವಿಮಾ ಕಂಪನಿ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಕೈಕೊಟ್ಟ ಮುಂಗಾರು: ಮಾನ್ವಿಯಲ್ಲಿ ಜೋಳ, ತೊಗರಿ, ಹತ್ತಿ ಬೆಳೆ ಬೆಳೆದು ನಷ್ಟ ಅನುಭವಿಸಿದ ರೈತನ ಕೈಹಿಡಿದ ಚೆಂಡು ಹೂವು ಕೃಷಿ ಕೈಕೊಟ್ಟ ಮುಂಗಾರು: ಮಾನ್ವಿಯಲ್ಲಿ ಜೋಳ, ತೊಗರಿ, ಹತ್ತಿ ಬೆಳೆ ಬೆಳೆದು ನಷ್ಟ ಅನುಭವಿಸಿದ ರೈತನ ಕೈಹಿಡಿದ ಚೆಂಡು ಹೂವು ಕೃಷಿ.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಾದ್ಯಂತ ಕಳೆದ ಜೂನ್, ಆಗಸ್ಟ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ತೊಗರಿ ಬೆಳೆ ಶೇ.60ಕ್ಕಿಂತ ಅಧಿಕ ಇಳುವರಿ ನಷ್ಟ ಸಂಭವಿಸಿದೆ ಎಂದು ಹೇಳಿದರು.

ತೊಗರಿ ಬೆಳೆಗೆ ನೆಟೆರೋಗ, ರಾಯಚೂರು ಜಿಲ್ಲೆ ರೈತರಲ್ಲಿ ಮನೆ ಮಾಡಿದ ಆತಂಕತೊಗರಿ ಬೆಳೆಗೆ ನೆಟೆರೋಗ, ರಾಯಚೂರು ಜಿಲ್ಲೆ ರೈತರಲ್ಲಿ ಮನೆ ಮಾಡಿದ ಆತಂಕ

ತೊಗರಿ ಬೆಳೆ ನಷ್ಟದ ಹಿನ್ನೆಲೆಯಲ್ಲಿ ತೊಗರಿ ಬೆಳೆ‌ ವಿಮೆ ಮಾಡಿಸಿದ ರೈತರಿಗೆ ಶೇ.25ರಷ್ಟು ಮಧ್ಯಂತರ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕುಂದು ಕೊರತೆ ಪರಿಹಾರ ಸಮಿತಿ ನಿರ್ಧರಿಸಿದೆ.

ನಿಮಗೆ ಇಲ್ಲಿಯವರೆಗೂ ಎಷ್ಟು ಬೆಳೆ ಹಾನಿ ಹಣ ಜಮೆಯಾಗಿದೆ ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻

➡️ ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..
https://landrecords.karnataka.gov.in/PariharaPayment/

ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ.

31 ಜಿಲ್ಲೆಗಳಿಗೆ 324 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಈ ಬಾರಿ 235 ತಾಲೂಕುಗಳ ಪೈಕಿ 216 ತಾಲೂಕುಗಳು ಬರ ಪೀಡಿತ ಅಂತ ರಾಜ್ಯ ಸರ್ಕಾರ (Karnataka Govt) ಘೋಷಣೆ ಮಾಡಿತ್ತು. ಆದರೆ ಈಗ ಮತ್ತೆ ಏಳು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ.

➡️ ಇಲ್ಲಿಯವರೆಗೂ ನಿಮಗೆ ಎಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ??

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (Flood)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ..

ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಹಳ್ಳಿಯ ಬೆಳೆ ಹಾನಿ ಜಮೆ ಆಗಿರುವ ರೈತರ ಪಟ್ಟಿ ಕಾಣುತ್ತದೆ.

ತೊಗರಿ ಬೆಳೆ; ಇಳುವರಿ ಹೆಚ್ಚಿಸಲು ರೈತರಿಗೆ ಸಲಹೆಗಳು ತೊಗರಿ ಬೆಳೆ; ಇಳುವರಿ ಹೆಚ್ಚಿಸಲು ರೈತರಿಗೆ ಸಲಹೆಗಳು

ವರದಿ ಸಲ್ಲಿಸುವಂತೆ ಸೂಚನೆ; ರೈತರಿಗೆ ಪರಿಹಾರ ಒದಗಿಸುವ ಕುರಿತಂತೆ ಸುದೀರ್ಘವಾಗಿ ಚರ್ಚಿಸಿ ಇದಕ್ಕೆ ಪೂರಕವಾಗಿ ಮುಂದಿನ ಮೂರು ದಿನಗಳಲ್ಲಿ (ನವೆಂಬರ್ 5 ರೊಳಗೆ) ಕೃಷಿ, ಕಂದಾಯ, ತೋಟಗಾರಿಕೆ ಹಾಗೂ ವಿಮಾ ಕಂಪನಿಯ ಅಧಿಕಾರಿಗಳು ಜಂಟಿಯಾಗಿ ಜಿಲ್ಲೆಯಾದ್ಯಂತ ತೊಗರಿ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಬೆಳೆ ಹಾನಿ ಸಮೀಕ್ಷೆ ಮಾಡುವಾಗ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಲಾ 10 ರಂತೆ ಬೆಳೆ ಪ್ರದೇಶಗಳನ್ನು ಗುರುತಿಸಿ ಪ್ರಯೋಗಕ್ಕೆ ಒಳಪಡಿಸಬೇಕು. ಪಾರದರ್ಶಕವಾಗಿ ಮತ್ತು ನಿಖರವಾಗಿ ಬೆಳೆ ಸಮೀಕ್ಷೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಖಡಕ್ ಸೂಚನೆ ಕೊಟ್ಟರು.

ಸಭೆಯಲ್ಲಿ ಮಾತನಾಡಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸಮದ್ ಪಾಟೀಲ್, ಸತತವಾಗಿ ವರುಣ ಅವಕೃಪೆಯಿಂದ ಜಿಲ್ಲೆಯಲ್ಲಿ ತೊಗರಿ ಬೆಳೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿ ರೈತ ಸಮುದಾಯ ಸಂಕಷ್ಟದಲ್ಲಿದ್ದು, ಮಧ್ಯಂತರ ಪರಿಹಾರಕ್ಕೆ ಸರ್ಕಾರಕ್ಕೆ ಕೋರಬೇಕೆಂದು ಹೇಳಿದರು.

➡️ ಕೊಪ್ಪಳದ ರೈತರಿಗೆ ಬಂತು ಫಸಲ್ ಬಿಮಾ ವಿಮಾ ಯೋಜನೆಯ ಮಧ್ಯಂತರ ಪರಿಹಾರ: ಸಂಕಟದಲ್ಲಿರುವ ಅನ್ನದಾತನಿಗೆ ಆಸರೆ ಮಳೆಯಿಲ್ಲದೆ ಬರದಿಂದ ಕಂಗೆಟ್ಟಿದ್ದ ಕೊಪ್ಪಳ ಜಿಲ್ಲೆಯ 7 ತಾಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತ ಎಂದು ಘೋಷಿಸಿತ್ತು. ಸರ್ಕಾರದಿಂದ ಬರ ಪರಿಹಾರ ಶೀಘ್ರ ಬರುವ ನಿರೀಕ್ಷೆಯ ನಡುವೆಯೇ, ವಿಮೆ ತುಂಬಿತ ರೈತರಿಗೆ ಮಧ್ಯಂತರ ಪರಿಹಾರ ಹಣ ಬಿಡುಗಡೆಯಾಗಿದೆ. ದಯವಿಟ್ಟು ಈ ಲೇಖನವನ್ನು ಕೊನೆಯವರೆಗೂ ತಪ್ಪದೇ ಓದಿ ಹಾಗೂ ಈ ಜಿಲ್ಲೆಗೆ ಬಂದಿರುವ ಮಧ್ಯಂತರ ಬೆಳೆ ವಿಮೆ ಹಣವನ್ನು ಈ ಕೆಳಕಂಡ ವಿಮಾ ಕಂಪನಿಯಿಂದ ಜಮೆಯಾಗಿದೆ.

ಕೊಪ್ಪಳದಲ್ಲಿ ಮೆಕ್ಕೆಜೋಳ, ಹತ್ತಿ, ಶೇಂಗಾ, ತೊಗರಿ ಬೆಳೆಗೆ ಮಧ್ಯಂತರ ಪರಿಹಾರ ಬಿಡುಗಡೆ ಮಾಡಲಾಗಿದೆ.

ಆಪತ್ಕಾಲಕ್ಕೆ ನೆರವು ಎಂಬಂತೆ ಬರದಿಂದ ಬಳಲಿ ಬೆಂಡಾಗಿರುವ ಜಿಲ್ಲೆಯ 33,375 ರೈತರಿಗೆ ವಿಮಾ ಕಂಪನಿಯಿಂದ 26.17 ಕೋಟಿ ರೂ.ಮಧ್ಯಂತರ ಪರಿಹಾರ ಬಂದಿದೆ.

ವರದಿಯನ್ವಯ ಸರಕಾರ, ವಿಮಾ ಕಂಪನಿಗಳಿಗೆ ರೈತರಿಗೆ ನೀಡಬೇಕಾದ ಮಧ್ಯಂತರ ಪರಿಹಾರ ನೀಡಿ ಎಂದು ಆದೇಶಿಸಿತ್ತು. ಕಳೆದ ಎರಡು ದಿನಗಳ ಹಿಂದೆ ಜಿಲ್ಲೆಗೆ ಹಣ ಬಿಡುಗಡೆಯಾಗಿದ್ದು, ಅನ್ನದಾತರ ಖಾತೆಗೆ ಹಂತ-ಹಂತವಾಗಿ ಜಮೆಯಾಗುತ್ತಿದೆ.

➡️ ಈ ಜಿಲ್ಲೆ 33,375 ರೈತರಿಗೆ ವಿಮಾ ಕಂಪನಿಯಿಂದ 26.17 ಕೋಟಿ ರೂ.ಮಧ್ಯಂತರ ಪರಿಹಾರ ಬಂದಿದೆ.

ಆನ್ಲೈನ್ ಮೂಲಕ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿಂನಂತೆ ನೋಡಿರಿ 👇🏻

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/Premium/CheckStatusMain_aadhaar.aspx

ಈ ಮೇಲೆ ಕಾಣುವ ಮುಖಪುಟದಲ್ಲಿ ನಿಮ್ಮ ಪ್ರಪೋಸಲ್ ನಂಬರ್ ಅಥವಾ ಮೊಬೈಲ್ ನಂಬರ್ ಇಲ್ಲವಾದಲ್ಲಿ ಆಧಾರ್ ಕಾರ್ಡ್ ನಂಬರನ್ನು ನಮೂದಿಸಿ. ಅಲ್ಲಿ ಸೀಸನ್ ಆಯ್ಕೆ ಮಾಡಿಕೊಂಡು. Search ಮೇಲೆ ಒತ್ತಿರಿ. ನಿಮಗೆ ಎಷ್ಟು ಹಣ ಜಮೆ ಆಗಿದೆ ಎಂಬ ಸ್ಟೇಟಸ್ ಅನ್ನು ಅಲ್ಲಿ ನೋಡಿ.

* ನಿಮ್ಮ ಜಿಲ್ಲೆಯ ಇನ್ಸೂರೆನ್ಸ್(insurance) ಕಂಪನಿ ಯಾವುದು ಯಾವ ಕಂಪನಿಯಿಂದ ನಿಮಗೆ ವಿಮೆ ಜಮೆಯಾಗಿದೆ ಇಲ್ಲಿ ನೋಡಿ..

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಯಾವ ಜಿಲ್ಲೆಗೆ ಯಾವ ಇನ್ಶೂರೆನ್ಸ್ ಕಂಪನಿ ಇರುವ ಬಗ್ಗೆ ಮಾಹಿತಿಯನ್ನು ನೀವು ತಿಳಿದುಕೊಳ್ಳುತ್ತೀರಿ.👇🏻

https://samrakshane.karnataka.gov.in/HomePages/frmKnowYourInsCompany.aspx

ಕಲಬುರಗಿ ಜಿಲ್ಲೆ ಕರ್ನಾಟಕದಲ್ಲಿ ತೊಗರಿ ನಾಡು ಎಂದೇ ಖ್ಯಾತಿ ಪಡೆದಿದೆ. ಕಳೆದ ವರ್ಷ ನೆಟೆ ರೋಗದಿಂದ ಬೆಳೆ ನಷ್ಟವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಆದರೆ ಈ ಬಾರಿ ಮಳೆಯ ಕೊರತೆ ಕಾರಣ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ.

ಕರ್ನಾಟಕ ಸರ್ಕಾರ ಬರಪೀಡಿತ ಜಿಲ್ಲೆ ಎಂದು ಕಲಬುರಗಿಯನ್ನು ಘೋಷಣೆ ಮಾಡಿದೆ. ಆದರೆ ತೊಗರಿ ಬೆಳೆ ನಷ್ಟದ ಕುರಿತು ಸರಿಯಾಗಿ ಸಮೀಕ್ಷೆ ನಡೆಸಿಲ್ಲ ಎಂದು ರೈತರು ಆರೋಪ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಸುಮಾರು 1.94 ಲಕ್ಷ ಹೆಕ್ಟೇರ್ ತೊಗರಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಕೃಷಿ ಇಲಾಖೆಯ ಪ್ರಾಥಮಿಕ ಸಮೀಕ್ಷೆಯಂತೆ ಮುಂಗಾರು ಹಂಗಾಮಿನಲ್ಲಿ ಒಟ್ಟು 2.76 ಲಕ್ಷ ಹೆಕ್ಟೇರ್ ಬೆಳೆ ಹಾನಿ ಕಂಡು ಬಂದಿದೆ ಎಂದು ಅಂದಾಜಿಸಲಾಗಿತ್ತು. ಜಿಲ್ಲೆಯಲ್ಲಿ ತೊಗರಿ ಮಾತ್ರವಲ್ಲ ಹತ್ತಿ, ಸೋಯಾ ಬಿನ್ ಬೆಳೆ ಸಹ ನಷ್ಟವಾಗಿದೆ. ಬೆಳೆ ನಷ್ಟದ ಕಾರಣ ತೊಗರಿ ಬೆಲೆಯೂ ಏರಿಕೆಯಾಗುವ ಸಾಧ್ಯತೆ ಇದೆ.

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/HLCYrALalJpLbeEMnLRyZB

25% ಮಧ್ಯಂತರ ಪರಿಹಾರ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. 25% ಮಧ್ಯಂತರ ಪರಿಹಾರ ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

➡️ಬೆಳೆ ಸಮೀಕ್ಷೆ ಮುಗಿದರೂ ಇನ್ನೂ ಆದರೂ ಬರ ಪರಿಹಾರ ಹಣ ಜಮೆಯಾಗಿಲ್ಲ!ಯಾವಾಗ ಬರುತ್ತದೆ ಬರ ಪರಿಹಾರ ಇಲ್ಲಿದೆ ಮಹತ್ವದ ಮಾಹಿತಿ 👇🏻
https://krushivahini.com/2023/11/10/when-will-drought-relief-come/

➡️ ಈ ಲಿಸ್ಟ್ ನಲ್ಲಿರುವ ರೈತರಿಗೆ 2019-2022 ಸಾಲಿನ ಬೆಳೆವಿಮೆ ಪರಿಹಾರ ಹಣವನ್ನು ಜಮ ಯಾಗಿಲ್ಲ https://krushivahini.com/2023/11/09/crop-insurance-compensation-not-deposited-to-these-people/

Leave a Reply

Your email address will not be published. Required fields are marked *