Gruhalakshmi scheme new update :- ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಬಹುತೇಕ ಸಕ್ಸಸ್ ಆಗಿದ್ದರು ಕೂಡ ಇನ್ನೂ ಸಾಕಷ್ಟು ಮಹಿಳೆಯರು ಒಂದು ಕಂತಿನ ಹಣವನ್ನು ಪಡೆದುಕೊಳ್ಳಲು ಸಾಧ್ಯವಾಗದೆ ಇರುವುದು ನಿಜಕ್ಕೂ ಬೇಸರದ ಸಂಗತಿ.

ಪ್ರತಿಯೊಬ್ಬರು ಅರ್ಜಿ ಸಲ್ಲಿಸಿದ ನಂತರ ಸರ್ಕಾರ ತಿಳಿಸಿದ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡಿದ್ದಾರೆ, ಬ್ಯಾಂಕಿಂಗ್ (Banking), ಆಧಾರ್ ಸೀಡಿಂಗ್, ಕೆ ವೈ ಸಿ, ಹೊಸ ಖಾತೆ ತೆರೆಯುವುದು, ರೇಷನ್ ಕಾರ್ಡ್ ತಿದ್ದುಪಡಿ ಹೀಗೆ ಪ್ರತಿಯೊಂದು ಕೆಲಸಗಳನ್ನು ಮಾಡಿದ್ದಾರೆ ಆದರೂ ಕೂಡ ಇನ್ನೂ ಎಂಟರಿಂದ ಒಂಬತ್ತು ಲಕ್ಷ ಮಹಿಳೆಯರ ಖಾತೆಗೆ ಹಣ ಮಾತ್ರ ಜಮಾ ಆಗಿಲ್ಲ.

ಈಗಾಗಲೇ ಸರ್ಕಾರ ಫಲಾನುಭವಿ (beneficiaries) ಮಹಿಳೆಯರ ಖಾತೆಗೆ ಹಣ ಜಮಾ ಆಗದೇ ಇರುವುದಕ್ಕೆ ಹಲವು ಕಾರಣಗಳನ್ನು ಕೂಡ ನೀಡಿತ್ತು. ಸರ್ಕಾರದ ಕಡೆಯಿಂದಲೂ ಹಣ ವರ್ಗಾವಣೆ (DBT) ಆಗದೆ ಇರುವುದಕ್ಕೆ ತಾಂತ್ರಿಕ ದೋಷಗಳು ಕಾರಣವಾಗಿದೆ.

➡️ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿರುವುದಿಲ್ಲ?

ಅದೆಷ್ಟೋ ಮಹಿಳೆಯರು ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು ಅದಕ್ಕೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಂಡಿಲ್ಲ 12 ಲಕ್ಷ ಮಹಿಳೆಯರು ಈ ಸಮಸ್ಯೆಯನ್ನು ಅನುಭವಿಸುತ್ತಿದ್ದು ಸರ್ಕಾರ ತಿಳಿಸಿರುವಂತೆ ಇನ್ನು ಮುಂದೆ ಆಧಾರ್ ಸೀಡಿಂಗ್ ಆಗದೆ ಇದ್ದರೂ ಕೂಡ ಅಂತಹ ಮಹಿಳೆಯರ ಖಾತೆಗೆ ಹಣ ಜಮಾ ಆಗಲಿದೆ.

ಇತ್ತೀಚಿಗೆ ಸಿಡಿಪಿಓ (CDPO officers) ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇತರ ಅಧಿಕಾರಿಗಳ ಜೊತೆಗೆ ಪರಿಶೀಲನ ಸಭೆ ನಡೆಸಿರುವ ಲಕ್ಷ್ಮಿ ಹೆಬ್ಬಾಳ್ವರ್ (Lakshmi hebbalkar) ಅವರು ಎಲ್ಲಿ ಯಾವ ರೀತಿಯ ತಪ್ಪಾಗಿದೆ ಎಂಬುದನ್ನು ಪರಿಶೀಲಿಸಿ ಇನ್ನು ಕೇವಲ 15 ದಿನಗಳಲ್ಲಿ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಮಹಿಳೆಯರ ಖಾತೆಗೂ ಹಣ ಜಮಾ ಮಾಡುವುದಾಗಿ ತಿಳಿಸಿದ್ದಾರೆ.

ಗೃಹ ಲಕ್ಷ್ಮಿ ಹಣ ಇನ್ನೂ ಜನ ಆಗಿಲ್ಲವೇ ಕೂಡಲೇ ಈ ನಂಬರ್‌ಗೆ ಕರೆ ಮಾಡಿ 👇🏻

https://dwcd.karnataka.gov.in/page/Contact+us/Deputy+Directors/en

ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಜಿಲ್ಲೆಗೆ ಸಂಬಂಧಿಸಿದ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಜಿಲ್ಲಾವಾರು ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು..

ಹಾಗಾಗಿ ಮುಂದಿನ ತಿಂಗಳಿನಿಂದ ಇನ್ನೂ ಒಂದಿಷ್ಟು ಫಲಾನುಭವಿಗಳು ಹಣ ಪಡೆದುಕೊಳ್ಳಲು ಸಾಧ್ಯವಾಗಬಹುದು.

ನಿಮಗೆ ಬೇಗನೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗಲು ತಕ್ಷಣವೇ ಇಂಡಿಯಾ ಪೋಸ್ಟ್ ಪೇಮೆಂಟ್ (IPPB) ಖಾತೆ ತೆರೆಯುವುದು. ಬಹಳ ಉತ್ತಮ ಸರಳವಾಗಿ ನಿಮ್ಮ ಖಾತೆಗೆ ಹಣ ಬರುತ್ತದೆ

ಕರ್ನಾಟಕದಲ್ಲಿ ಸುಮಾರು 33 ಐಪಿಪಿಬಿ (India Post payment) ಶಾಖೆಗಳು ಇವೆ. ಹಾಗಾಗಿ ಇಲ್ಲಿ ಖಾತೆ ತೆರೆದರೆ ಗೃಹಲಕ್ಷ್ಮಿ ಯೋಜನೆಯ ಹಣ ಬಹಳ ಬೇಗ ಮಹಿಳೆಯರ ಖಾತೆ ತಲುಪುತ್ತದೆ.

ಪೋಸ್ಟ್ ಆಫೀಸ್ ನಲ್ಲಿ ಖಾತೆ ತೆರೆದ ಕೆಲವೇ ಗಂಟೆಗಳಲ್ಲಿ ಗೃಹಲಕ್ಷ್ಮಿ ಹಣ ಗೃಹಿಣಿಯರ ಖಾತೆಗೆ ಜಮಾ ಆಗಿರುವ ಉದಾಹರಣೆಗಳು ಇವೆ, ಹಾಗಾಗಿ ಬ್ಯಾಂಕ್ ಗಿಂತಲೂ ಪೋಸ್ಟ್ ಆಫೀಸ್ ಖಾತೆ ತೆರೆಯುವುದು ಉತ್ತಮ ಎಂದು ಲಕ್ಷ್ಮಿ ಹೆಬ್ಬಾಸ್ಕರ್ ತಿಳಿಸಿದ್ದಾರೆ.

ಮೊದಲಿಗೆ ಈ ಕೆಳಕಂಡ ಲಿಂಕನ್ನು ಒತ್ತಿರಿ 👇🏻

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.

ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.

ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು..

ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..

ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.

ತದನಂತರ ನಿಮಗೆ ಇಲ್ಲಿಯವರೆಗೂ ಗೃಹಲಕ್ಷ್ಮಿ ಯೋಜನೆ ಅಡಿ ಎಷ್ಟು ಹಣ ಜಮೆಯಾಗಿದೆ ತಿಳಿಯುತ್ತದೆ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.

➡️ಸಹಾಯವಾಣಿಗೆ ಕರೆ ಮಾಡಿ – Helpline ನಂಬರ್

ಎಷ್ಟೋ ಮಹಿಳೆಯರಿಗೆ ತಮ್ಮ ಖಾತೆಯಲ್ಲಿ ಯಾವ ಸಮಸ್ಯೆ ಇದೆ, ತಮಗೆ ಯಾಕೆ ಹಣ ಬರುತ್ತಿಲ್ಲ ಎನ್ನುವುದರ ಬಗ್ಗೆ ಅರಿವು ಇಲ್ಲ. ನಾವು ಎಲ್ಲಾ ದಾಖಲೆಗಳನ್ನು ಸರಿಯಾಗಿಯೇ ಕೊಟ್ಟಿದ್ದೇವೆ, ಅರ್ಜಿ ಸಲ್ಲಿಸಿದ್ದು ಆಗಿದೆ ಆದರೂ ಹಣ ಬರುತ್ತಿಲ್ಲ ಯಾಕೆ ಎನ್ನುವ ಗೊಂದಲ ಹಲವು ಮಹಿಳೆಯರಲ್ಲಿ ಇದೆ

ಇದಕ್ಕಾಗಿ ಈ ಸಮಸ್ಯೆ ಪರಿಹಾರ ಮಾಡಿಕೊಳ್ಳುವುದಕ್ಕಾಗಿ ನೀವು ರಾಜ್ಯ ಸರ್ಕಾರ ನೀಡಿರುವ ಸಹಾಯವಾಣಿ ಸಂಖ್ಯೆ 1902 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/HLCYrALalJpLbeEMnLRyZB

ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಅದರ ಜಮಯಾಗಿಲ್ಲವೇ ಇವರನ್ನು ಸಂಪರ್ಕಿಸಿ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಗೃಹಲಕ್ಷ್ಮಿ ಯೋಜನೆಯ ಹಣ ಜಮ ಕುರಿತುನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

➡️ಮತ್ತೆ ಏರಿಕೆಯಾಗುತ್ತಾ ಟೊಮೇಟೊ ಬೆಲೆ? ಟೊಮೇಟೊ ಬೆಳೆಗಾರರಿಗೆ ಸಂತಸದ ಸುದ್ದಿ👇🏻 https://krushivahini.com/2023/11/16/tomato-rate-increased/

➡️ ಈ ಪಟ್ಟಿಯಲ್ಲಿ ಇದ್ದವರ ಪಾನ್ ಕಾರ್ಡ್ ರದ್ದಾಗಿದೆ ಕೂಡಲೇ ನಿಮ್ಮ ಹೆಸರನ್ನು ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಿ👇🏻 https://krushivahini.com/2023/11/15/adhaar-pan-link-status-check/

Leave a Reply

Your email address will not be published. Required fields are marked *