Crop insurance released :- ಹೊಸಪೇಟೆ (ವಿಜಯನಗರ): ಬರಗಾಲದಿಂದ ತತ್ತರಿಸಿರುವ ವಿಜಯನಗರ ಜಿಲ್ಲೆಯ ರೈತರಿಗೆ ಕೊನೆಗೂ ಒಂದು ಸಂತಸದ ಸುದ್ದಿ ಲಭಿಸಿದ್ದು, ಬೆಳೆ ವಿಮೆ ಮಾಡಿಸಿದ 26,254 ಕೃಷಿಕರಿಗೆ ಮುಂಗಾರು ಹಂಗಾಮಿನ ಮಧ್ಯಂತರ ಬೆಳೆ ಪರಿಹಾರವಾಗಿ 719.27 ಕೋಟಿ ವಿಮಾ ಪರಿಹಾರ ಹಣ ಸಂದಾಯವಾಗಿದೆ.

ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ದಿನ ನಾವು ಈ ಲೇಖನದಲ್ಲಿ ಮುಂಗಾರು ಹಂಗಾಮಿನ ಬೆಳೆ ವಿಮೆ ಮಾಡಿಸಿದ ರೈತರಿಗೆ ಈಗಾಗಲೇ ಬೆಳೆ ವಿಮೆ ಹಣವನ್ನು ಪಾವತಿಸಲಾಗಿದೆ. ತಪ್ಪದೇ ನಿಮ್ಮ ಖಾತೆಗೆ ಎಷ್ಟು ಹಣ ಬಂದಿದೆ ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಿ… 🙏🏻🙏🏻 ದಯವಿಟ್ಟು ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ

ಮುಂಗಾರು ಹಂಗಾಮಿನ ಬೆಳೆ ನಷ್ಟದ ಸಮೀಕ್ಷೆಯನ್ನು ಕಳೆದ ತಿಂಗಳು ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆಗಳು ಹಾಗೂ ವಿಮಾ ಕಂಪನಿಗಳು ಜಂಟಿಯಾಗಿ ನಡೆಸಿದ್ದವು. ಅದರ ವರದಿಯನ್ನು ಆಧರಿಸಿ ಇದೀಗ ಮಧ್ಯಂತರ ವಿಮಾ ಪರಿಹಾರ ದೊರೆತಿದೆ. ತಾಲ್ಲೂಕುವಾರು ಮಧ್ಯಂತರ ವಿಮಾ ಪರಿಹಾರದ ಪಟ್ಟಿ

➡️ ಆನ್ಲೈನ್ ಮೂಲಕ ಬೆಳೆ ವಿಮೆ ಹಣ ಜಮೆ ಆಗಿರುವುದನ್ನು ಸ್ಟೇಟಸ್ ಚೆಕ್ ಮಾಡುವುದು ಹೇಗೆ ಈ ಕೆಳಗಿನಂತೆ ನೋಡಿರಿ 👇🏻

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/Premium/CheckStatusMain_aadhaar.aspx

ಹಿಂಗಾರು ಬೆಳೆ ವಿಮೆ ನೋಂದಣಿ ಆರಂಭವಾಗಿದೆ..
ನೀವು ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಕಟ್ಟಬೇಕು? ಹಾಗೂ ಎಷ್ಟು ಹಣ ಕಟ್ಟಿದರೆ ಎಷ್ಟು ಪರಿಹಾರ ಧನ ಸಿಗಲಿದೆ ಎಂದು ಒಂದೇ ಕ್ಲಿಕ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.

https://samrakshane.karnataka.gov.in/Premium/Crops_You_Can_Insure.aspx

ನಂತರ ನಿಮ್ಮ ವೈಯಕ್ತಿಕ ದಾಖಲೆಗಳನ್ನು ತುಂಬವ ಸಮಯ ಬರುತ್ತದೆ ಅಲ್ಲಿ ನಿಮ್ಮ, ಜಿಲ್ಲೆ , ತಾಲೂಕು ಮತ್ತು ಹೋಬಳಿ ಹಾಗೂ ಗ್ರಾಮ ಯಾವುದು ಎಂದು ಆಯ್ಕೆ ಮಾಡಿ ನಂತರ display ಮೇಲೆ ಕ್ಲಿಕ್ ಮಾಡಿ. ಹೀಗೆ ಮಾಡಿದಾಗ ಕೆಳಗಡೆ ತೋರಿಸಿರುವ ಪೇಜ್ ಓಪನ್ ಆಗುತ್ತದೆ.

ಹೀಗೆ ಮಾಡಿದರೆ ಕೆಳಗಿನಂತೆ ನೀವು ಬೆಳೆ ವಿಮೆ ಕಟ್ಟಲು ಬರುವ ಬೆಳೆ ಹಾಗೂ ಬೆಳೆ ವಿಮೆ ಕಂತು ಎಷ್ಟು ಹಾಗೂ ನಿಮಗೆ ಬರಬೇಕಾದ ಬೆಳೆ ವಿಮೆ ಪರಿಹಾರದ ಮೊತ್ತ ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪಾಲಿನ ಕಂತು ಇದರ ಸಂಪೂರ್ಣ ಮಾಹಿತಿ ನಿಮಗೆ ತೋರಿಸುತ್ತದೆ.

➡️ ಯಾರಿಗೆ ಎಷ್ಟು ಬೆಳೆ ವಿಮೆ ಹಣ ಜಮೆಯಾಗಲಿದೆ? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ..

* ಬೆಳೆ ವಿಮೆ ಹಣ ಯಾರಿಗೆ ಎಷ್ಟು ಹಣ ಜಮೆಯಾಗುತ್ತದೆ? ಎಷ್ಟು ಹಣ ರೈತರು ಪಾವತಿಸಬೇಕು ಎಂಬುದನ್ನು ಚೆಕ್ ಮಾಡಲು ಈ ಈ ಕೆಳಗೆ ತೋರಿಸಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.

https://samrakshane.karnataka.gov.in/Premium/Premium_Chart.aspx

ಅಲ್ಲಿ ನಿಮಗೆ 2023-24 ಹಾಗೂ Season ನಲ್ಲಿ ಹಿಂಗಾರು/rabi ಎಂದು ಆಯ್ಕೆ ಮಾಡಿ. ನಂತರ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ, ನಿಮ್ಮ ಗ್ರಾಮ ಆಯ್ಕೆ ಮಾಡಿಕೊಂಡು ನಿಮ್ಮ ಬೆಳೆ ಎಷ್ಟು ಎಕರೆ ಎಂದು ಅಲ್ಲಿ ನಮೂದಿಸಬೇಕು. ನಂತರ ಗುಂಟಾ ನಮೂದಿಸಿ ನಂತರ ಅಲ್ಲಿ ಕಾಣುವ Show Premium(ಶೋ ಪ್ರೈಮಿಯಂ) ಮೇಲೆ ಕ್ಲಿಕ್ ಮಾಡಿ ನೀವು ಚೆಕ್ ಮಾಡಬಹುದು..

ಹರಪನಹಳ್ಳಿಯಲ್ಲಿ ಒಬ್ಬ ರೈತರಿಗೆ ಗರಿಷ್ಠ 71.48 ಲಕ್ಷದಷ್ಟು ಹಣ ಬಂದಿದ್ದರೆ, ಹೂವಿನಹಡಗಲಿಯಲ್ಲಿ ಇನ್ನೊಬ್ಬ ರೈತರಿಗೆ 31.14 ಲಕ್ಷದಷ್ಟು ಪರಿಹಾರ ದೊರೆತಿದೆ. ಹರಪನಹಳ್ಳಿಯ ಈ ರೈತ ತಮ್ಮ 49 ಎಕರೆ ಕೃಷಿ ಭೂಮಿಗೆ ವಿಮೆ ಮಾಡಿಸಿದ್ದರು.

‘ವಿಮೆ ಮಾಡಿಸುವ ವಿಚಾರದಲ್ಲಿ ರೈತರು ಹಿಂದೇಟು ಹಾಕಬಾರದು. ಬರಗಾಲ, ಪ್ರವಾಹದಂತಹ ಪರಿಸ್ಥಿತಿಗಳಲ್ಲಿ ಅದು ರೈತರ ಕೈಯನ್ನು ನಿಜವಾಗಿಯೂ ಹಿಡಿಯುತ್ತದೆ. ಅದರ ಹೊರತಾಗಿಯೂ ಬೆಳೆ ತೆನೆಕಟ್ಟುವ ಹಂತದಿಂದ ಕಟಾವು ನಂತರದ 15 ದಿನಗಳ ವರೆಗೆ ಒಟ್ಟು ಐದು ಸಂದರ್ಭಗಳಲ್ಲಿ ವಿಮೆ ಪರಿಹಾರ ಪಡೆಯುವ ಅವಕಾಶ ಇದೆ.

ಮುಂಗಾರು ಹಂಗಾಮಿಗೆ ಬಂದಿರುವ ಮಧ್ಯಂತರ ಪರಿಹಾರ ಇದು, ಪೂರ್ಣ ಪ್ರಮಾಣದ ಪರಿಹಾರ ಬಂದಾಗ ಆಗಿರುವ ಬೆಳೆ ನಷ್ಟದ ಶೇ 70ರಷ್ಟು ಪರಿಹಾರ ವಿಮೆ ರೂಪದಲ್ಲಿ ರೈತರಿಗೆ ಸಿಗಲಿದೆ. ಇದು ನಿಜಕ್ಕೂ ಈ ಸಂದಿಗ್ಧ ಸ್ಥಿತಿಯಲ್ಲಿ ಉತ್ತಮ ಪರಿಹಾರವೇ ಆಗಿದೆ. ಜಿಲ್ಲೆಯಲ್ಲಿ ಬಜಾಜ್ ಅಲಯನ್ಸ್ ವಿಮಾ ಕಂಪನಿ ಕೃಷಿ ವಿಮೆ ಮಾಡುವ ಹೊಣೆ ಹೊತ್ತುಕೊಂಡಿದೆ‘ ಎಂದು ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದ್ದಲ್

ಬೆಳೆ ವಿಮೆ ಮಾಡಿಸಿ ಪರಿಹಾರದ ಪ್ರಮಾಣ ಗಮನಿಸಿದರೆ ವಿಮಾ ಕಂತು ಹೆಚ್ಚೇನೂ ಅಲ್ಲ ಎಂಬುದನ್ನು ರೈತರು ಅರ್ಥ ಮಾಡಿಕೊಳ್ಳಬೇಕು.

ಶರಣಪ್ಪ ಮುದ್ದಲ್‌, ಜಂಟಿ ಕೃಷಿ ನಿರ್ದೇಶಕ..

ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/HLCYrALalJpLbeEMnLRyZB

ಈ ಜಿಲ್ಲೆಯ ರೈತರಿಗೆ ಬೆಳೆವಿಮೆ ಜಮೆಯಾಗಿದೆ:-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬರ ಪರಿಹಾರ ಕುರಿತು ನೀಡಿದ ಮಾಹಿತಿ ಉಪಯೋಗವಿದೆ.

ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

➡️ ಬೆಳೆ ಸಮೀಕ್ಷೆಯ ಸ್ಥಿತಿ ಹೀಗಿದ್ದರೆ ಮಾತ್ರ ನಿಮಗೆ ಪರಿಹಾರದ ಹಣ ಬರುತ್ತದೆ! ಬರ ಪರಿಹಾರ ಪಡೆಯಲು ಈ ಕೆಲಸ ಕಡ್ಡಾಯ ತಪ್ಪದೇ ನೋಡಿ https://krushivahini.com/2023/11/20/check-bele-samikshe-status/

Leave a Reply

Your email address will not be published. Required fields are marked *