This work is mandatory to get drought relief amount :- ನಮಸ್ಕಾರ ಆತ್ಮೀಯ ರೈತ ಬಾಂಧವರೇ, ಇಂದಿನ ಲೇಖನದಲ್ಲಿ ನಾವು ಈಗಾಗಲೇ ಬರ ಪರಿಹಾರ ಘೋಷಣೆಯಾಗಿದೆ ಹಾಗೂ ಇನ್ನೂ ಕೆಲವೇ ದಿನಗಳಲ್ಲಿ ಬರ ಪರಿಹಾರ ಹಣವನ್ನು ನಮ್ಮ ಖಾತೆಗೆ ಡಿ ಬಿ ಟಿ ಮೂಲಕ ಹಾಕುತ್ತಾರೆ. ತಪ್ಪದೇ ಈ ಲೇಖನದಲ್ಲಿ ನೀವು ಇನ್ನೂ ಕೇವಲ ಮೂರು ದಿನದಲ್ಲಿ ನೀವು ಏನಾದರೂ ಮಾಡಿಸಿಕೊಂಡಿಲ್ಲ ಹಾಗೂ ನಿಮ್ಮ ಹೊಲದ ಸರ್ವೆ ನಂಬರನ್ನು ದಾಖಲಿಸದಿದ್ದರೆ ನಿಮಗೆ ಯಾವುದೇ ತರಹದ ಬರ ಪರಿಹಾರ ಹಣ ಬರುವುದಿಲ್ಲ.. 🙏🏻

ತಪ್ಪದೆ ತಿಳಿಯಿರಿ(Highlight’s) :-

1) ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಫ್ರೂಟ್ಸ್ ಐ ಡಿ ಸ್ಟೇಟಸ್ ಅನ್ನು ತಿಳಿದುಕೊಳ್ಳಿ??

2) ಮೊಬೈಲ್ ನಲ್ಲಿ ಎಫ್ ಐಡಿಯನ್ನು ಹೇಗೆ ನೊಂದಣಿ ಮಾಡಿಕೊಳ್ಳುವುದು ತಿಳಿಯಿರಿ??

3) ನಿಮ್ಮ ಹೊಲದ ಎಷ್ಟು ಸರ್ವೇ ನಂಬರ್ ಗಳು ಫ್ರೂಟ್ಸ್ ಐಡಿಗೆ ಲಿಂಕ್ ಆಗಿದೆ??.ಎಂದು ನೋಡಿರಿ

4) ನಿಮಗೆ ಬರ ಪರಿಹಾರ ಬರುತ್ತದೆ ಇಲ್ಲವೋ ಈ ಪಟ್ಟಿಯಲ್ಲಿ ಚೆಕ್ ಮಾಡಿಕೊಳ್ಳಿ..

5) ನಿಮ್ಮ ಸ್ಟೇಟಸ್ ಹೀಗಿದ್ದರೆ ಮಾತ್ರ ನಿಮಗೆ ಪರಿಹಾರ ಹಣ ಬರುತ್ತದೆ?? NPCI active ಎಂದು ಇರಬೇಕು..

ಬೆಂಗಳೂರು: ಬರ ಪರಿಹಾರ ಪಡೆಯುವುದಕ್ಕೆ ರೈತರ ಗುರುತಿನ ಚೀಟಿ (FID) ಕಡ್ಡಾಯವಾಗಿದೆ. ಈ ಗುರುತಿನ ಚೀಟಿ ಪಡೆಯಲು ರೈತರು ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಪ್ರೂಟ್ಸ್ ತಂತ್ರಾಂಶದಲ್ಲಿ ರೈತರ ಜಮೀನಿನ ಮಾಹಿತಿಯನ್ನು ನಮೂದಿಸಿ FID ಪಡೆಯುವುದು ಕಡ್ಡಾಯ. ಒಂದು ವೇಳೆ ನಮೂದಿಸದ ರೈತರಿಗೆ ಬರ ಪರಿಹಾರ ಸಿಗುವುದಿಲ್ಲ. ಈ ಹಿನ್ನಲೆಯಲ್ಲಿ ಡಿ.22ರವರೆಗೆ ಪ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸುವುದಕ್ಕೆ ಅವಕಾಶ ನೀಡಲಾಗಿತ್ತು.

1)➡️ ಆಧಾರ್ ನಂಬರ್ ಹಾಕಿ ನಿಮ್ಮ FID ಸ್ಟೇಟಸ್ ತಿಳಿದುಕೊಳ್ಳಿ👇🏻 ನಿಮ್ಮ ಎಫ್ ಐ ಡಿ ಜನರೇಟ್ ಆಗಿದೆಯೋ ಇಲ್ಲವೋ ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻

ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx

ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಎಫ್ ಐ ಡಿ ಜನರೇಟ್ ಆಗಿರುವುದು ನಿಮಗೆ ಕಾಣುತ್ತದೆ..

ಈವರೆಗೆ ಎಫ್‌ಐಡಿ ಮಾಡಿಸದೇ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್‌ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.

➡️ 2) ನಿಮ್ಮ ಮೊಬೈಲ್ ನಲ್ಲೇ FID ನೊಂದಣಿ ಮಾಡುವುದು ಹೇಗೆ??

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ https://fruits.karnataka.gov.in/OnlineUserLogin.aspx

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.”Citizen Registration” ಮೇಲೆ ಕ್ಲಿಕ್ ಮಾಡಿ.

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,l agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.

ನಂತರ ನಿಮ್ಮ ಮೊಬೈಲ್ ನಂಬರ್, ಇಮೇಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬಂದಿರುವ ಒಟಿಪಿ OTP ಅನ್ನು ಅಲ್ಲಿ ಹಾಕಿ, ನಂತರ Submit ಮೇಲೆ ಕ್ಲಿಕ್ ಮಾಡಬೇಕು.

ನಂತರ ನೀವು Password create ಮಾಡಿಕೊಂಡು ಮುಂದೆ ಲಾಗಿನ್ ಆಗಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿದರೆ ನಿಮ್ಮ FID (ಫ್ರೂಟ್ಸ್ ಐ ಡಿ) ನಿಮಗೆ ಸಿಗಲಿದೆ.

➡️ 3) ನಿಮ್ಮ ಹೊಲದ ಎಲ್ಲಾ ಸರ್ವೆ ನಂಬರನ್ನು ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ದಾಖಲಿಸಿ. ತಪ್ಪದೇ ಬರ ಪರಿಹಾರವನ್ನು ಪಡೆಯಿರಿ. ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿ ಯಾಗಿವೆ ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻👇🏻

https://fruits.karnataka.gov.in/OnlineUserLogin.aspx

ನಂತರ ನೀವು ಸಿಟಿಜನ್ ರಿಜಿಸ್ಟ್ರೇಷನ್ ಆಯ್ಕೆ ಮಾಡಿಕೊಂಡು.

➡️ ಅದೇ ರೀತಿಯಾಗಿ ನೀವು ಅಲ್ಲಿ ಕಾಣುವ (registration status) ಮೇಲೆ ಕ್ಲಿಕ್ ಮಾಡಿದರೆ

ನಿಮ್ಮ ಹೊಲದ ಇಷ್ಟು ಸರ್ವೇ ನಂಬರ್ ಗಳು ಅಲ್ಲಿ ನೋಂದಣಿ ಯಾಗಿವೆ ಎಂಬ ಮಾಹಿತಿ ನಿಮಗೆ ಸಿಗುತ್ತದೆ.

ಒಂದು ವೇಳೆ ನಿಮ್ಮ ಹೊಲ 7 ಎಕರೆ ಇದ್ದಲ್ಲಿ ನೀವು ಕೇವಲ ಎರಡು ಎಕರೆ ನೊಂದಣಿ ಮಾಡಿದರೆ ನಿಮಗೆ ಬರ ಪರಿಹಾರವಾಗಿ ಎರಡು ಎಕರೆಗೆ ಸೀಮಿತವಾದ ಹಣ ಅಷ್ಟೇ ಬರುತ್ತದೆ. ಹಾಗಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ನೀವು ತಪ್ಪದೆ ನಿಮ್ಮ ಹೊಲದ ಸಂಪೂರ್ಣ ಮಾಹಿತಿಯನ್ನು ನೋಂದಣಿ ಮಾಡಬೇಕು.

ಒಂದು ವೇಳೆ ನಿಮ್ಮ ಹೊಲ 8 ಅಥವಾ 10 ಎಕರೆ ಇದ್ದು ನೀವು ಕೇವಲ ಎರಡು ಎಕರೆ ಹೊಲವನ್ನು ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ದಾಖಲಿಸಿದರೆ ನಿಮಗೆ ಕೇವಲ ಎರಡು ಎಕರೆಗೆ ಸೀಮಿತವಾದ ಬರ ಪರಿಹಾರದ ಹಣವನ್ನು ಹಾಕುತ್ತಾರೆ. ಆದಕಾರಣ ನಿಮ್ಮ ಸರ್ವೇ ನಂಬರ್ ಗಳನ್ನು ತಪ್ಪದೇ ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಿ. ನಿಮ್ಮ ಎಷ್ಟು ಸರ್ವೇ ನಂಬರ್ ಗಳು ಫ್ರೂಟ್ಸ್ ಅಡಿಯಲ್ಲಿ ದಾಖಲಾಗಿವೆ ಇಲ್ಲಿ ಚೆಕ್ ಮಾಡಿಕೊಳ್ಳಿ. ದಯವಿಟ್ಟು ಬರ ಪರಿಹಾರವನ್ನು ಪಡೆಯಿರಿ..

➡️ 4) ಯಾಕೆ ನಮಗೆ ಬರ ಪರಿಹಾರ ಬರುವುದಿಲ್ಲ? ಕಾರಣ ತಿಳಿಯಿರಿ 👇🏻

ಈ ಪಟ್ಟಿಯಲ್ಲಿ ಇರುವ ರೈತರು ಇನ್ನೂ ಆದರೆ ಎಫ್ ಐ ಡಿ ಮಾಡಿಸಿಕೊಂಡಿಲ್ಲ?? ಇನ್ನೂ ಮೂರು ದಿನಗಳಲ್ಲಿ fid ಮಾಡಿಸದಿದ್ದರೆ ನಿಮಗೆ ಬರ ಪರಿಹಾರ ಹಣ ಬರುವುದಿಲ್ಲ 🙏🏻

👆👆ಈ ಮೇಲಿರುವ ಹಿರೇಹುಲ್ಲಾಳ ಗ್ರಾಮದ ರೈತರು 3 ದಿನಗಳ ಒಳಗಾಗಿ FID ಮಾಡಿಸಿಕೊಳ್ಳಲು ತಿಳಿಸಿದೆ ಮಾಡಿಸದೇ ಇದ್ದರೆ ರೈತರಿಗೆ ಬೆಳೆ ಹಾನಿ ಬೆಳೆ ಪರಿಹಾರ ಬೆಳೆ ವಿಮೆ ಇನ್ನಿತರೇ ಯಾವುದೇ ಪರಿಹಾರ ಬರುವುದಿಲ್ಲ FID ಮಾಡಿಸಲು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಮತ್ತು ರೈತ ಸಂಪರ್ಕ ಕೇದ್ರಕ್ಕೆ ತೆರಳಿ FID ಮಾಡಿಸಲು ಸೂಚಿಸಿದೆ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಆಡಳಿತ ಅಧಿಕಾರಿಗಳನ್ನು ಬೆಟ್ಟಿ ಮಾಡಿ ತಿಳಿಯಿರಿ.

ಈ ಲಿಸ್ಟ್ ನಲ್ಲಿ ಇರುವ ತಾಲೂಕುಗಳಿಗೆ ಬರ ಪರಿಹಾರ ಬರುವುದು ಅನುಮಾನ..ಹಾಗೂ ಈ ಲಿಸ್ಟ್ ನಲ್ಲಿರುವ ರೈತರಿಗೂ ಕೂಡ ಹಣ ಬರುವುದಿಲ್ಲ..ನಿಮಗೆ ಬರ ಪರಿಹಾರ ಬೇಕಿದ್ದಲ್ಲಿ ತಪ್ಪದೆ ಕೊನೆಯವರೆಗೂ ಲೇಖನವನ್ನು ಓದಿ ನಿಮ್ಮ ತಾಲೂಕು ಇದೆಯೇ ಖಚಿತಪಡಿಸಿಕೊಳ್ಳಿ. ಹಾಗೂ ನಿಮಗೆ ಬರ ಪರಿಹಾರ, ಬೆಳೆ ವಿಮೆ, ಬೆಳೆ ಹಾನಿ ಹಣ ಬರಬೇಕೆಂದರೆ ಈ ಕೆಲಸ ತಪ್ಪದೆ ಮಾಡಿ.. ನಿಮ್ಮ ಎಫ್ ಐ ಡಿ ಸ್ಟೇಟಸ್ ಅನ್ನು ತಪ್ಪದೇ ನಿಮ್ಮ ವ್ಯಾಪ್ತಿಗೆ ಬರುವ ಗ್ರಾಮ ಲೆಕ್ಕಾಧಿಕಾರಿಗಳ ಹತ್ತಿರ ಹೋಗಿ ಪರಿಶೀಲನೆ ಮಾಡಿ ಕೊಳ್ಳಿ.

➡️ 5) ನಿಮ್ಮ ಸ್ಟೇಟಸ್ ಹೀಗಿದ್ದರೆ ಮಾತ್ರ ನಿಮಗೆ ಪರಿಹಾರ ಹಣ ಬರುತ್ತದೆ 🙏🏻??

https://fruits.karnataka.gov.in/OnlineUserLogin.aspx

ನಂತರ ನೀವು ಸಿಟಿಜನ್ ರಿಜಿಸ್ಟ್ರೇಷನ್ ಆಯ್ಕೆ ಮಾಡಿಕೊಂಡು.

➡️ ಅದೇ ರೀತಿಯಾಗಿ ನೀವು ಅಲ್ಲಿ ಕಾಣುವ NPCI CHECK ಮೇಲೆ ಕ್ಲಿಕ್ ಮಾಡಿದರೆ..

NPCI active ಎಂದು ಇದ್ದರೆ ಮಾತ್ರ ಸರ್ಕಾರದಿಂದ ಬರುವ ಪಿ ಎಂ ಕಿಸಾನ್, ಬೆಳೆ ವಿಮೆ ಪರಿಹಾರ, ಹಾಗೂ ಬರ ಪರಿಹಾರ ಹಣ ಬರುತ್ತದೆ. ಇಲ್ಲವಾದಲ್ಲಿ ನಿಮಗೆ ಯಾವುದೇ ತರಹದ ಹಣ ಬರುವುದಿಲ್ಲ…

ಹೀಗೆ ಬಂದಿರುವ FID ಯನ್ನು ಕೃಷಿ ಇಲಾಖೆ,ರೇಷ್ಮೆ, ಅಥವಾ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ನಂತರ FID ಯನ್ನು ಪಿ ಎಂ ಕಿಸಾನ್ ಯೋಜನೆ, ಬೆಳೆಸಾಲ, ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ನೀವು ಈ FID ಅನ್ನು ಬಳಸಬಹುದು.

ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..👇🏻

https://landrecords.karnataka.gov.in/PariharaPayment/

ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ.

ಈ ಬಗ್ಗೆ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ರೈತರ ಜಮೀನಿನ ಸಂಪೂರ್ಣ ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸುವಂತೆ ಕಳೆದ ಎರಡು ತಿಂಗಳಿನಿಂದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರಂತರವಾಗಿ ಸೂಚಿಸಲಾಗುತ್ತಿದೆ. ಆದರೂ, ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಜಮೀನಿನ ಮಾಹಿತಿ ಶೇ.70ರಷ್ಟು ಮೀರಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ರೈತರಿಗೆ ಅನ್ಯಾಯವಾಗಲಿದೆ ಎಂದರು.

ಬರ ಪರಿಹಾರ ಫ್ರೂಟ್ಸ್ ದತ್ತಾಂಶವನ್ನು ಆಧರಿಸಿರುವ ಕಾರಣ ಜಿಲ್ಲಾಧಿಕಾರಿಗಳು ಮಾಡುವ ಸಣ್ಣ ತಪ್ಪು ಸಹ ರೈತರ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಇನ್ನಾದರೂ ಅಧಿಕಾರಿಗಳು ಆಂದೋಲನ ಮಾದರಿಯಲ್ಲಿ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು. ಅವರು ಸೂಚಿಸಿದರು. ರೈತರು ತಪ್ಪದೇ ಪ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಜಮೀನಿನ ಮಾಹಿತಿಯನ್ನು ನಮೂದಿಸಬೇಕಾಗಿದೆ. ಇಲ್ಲವಾದಲ್ಲಿ ರಾಜ್ಯ ಸರ್ಕಾರದಿಂದ ನೀಡಲಾಗುವಂತ ಬರ ಪರಿಹಾರ ಡಿಬಿಟಿ ಮೂಲಕ ವರ್ಗಾವಣೆ ಆಗುವುದಿಲ್ಲ ಎಂದು ತಿಳಿಸಿದರು.

ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/BV4GiFXeLXJKfXFJFZSiGj

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು.

ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *