Check your FID status in mobile :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ನೀವು ಈಗಾಗಲೇ ಫ್ರೂಟ್ಸ್ ತಂತ್ರಾಂಶದಲ್ಲಿ ನಿಮ್ಮ ಹೊಲದ ವಿಸ್ತೀರ್ಣವನ್ನು ದಾಖಲಿಸಿದ್ದೀರಿ., (ನಿಮ್ಮ ಹೊಲದ ಎಷ್ಟು ಸರ್ವೇ ನಂಬರ್ ಗಳು ಇದರಲ್ಲಿ ದಾಖಲೆಯಾಗಿ ನೋಡಿ👇🏻).

ಆದರೆ ರೈತರೇ ಬಹುಮುಖ್ಯವಾದ ಮಾಹಿತಿ ನಿಮ್ಮ ಹೊಲದ ಪಹಣಿಯೊಂದಿಗೆ ಫ್ರೂಟ್ಸ್ ಐಡಿ ಜೋಡಣೆಯಾಗುವುದು ಕಡ್ಡಾಯ. ಒಂದು ವೇಳೆ ನಿಮ್ಮ ಹೊಲದ ಪಹಣಿಯ ಜೊತೆ ಫ್ರೂಟ್ಸ್ ಐಡಿ ಜೋಡಣೆಯಾಗದಿದ್ದರೆ ನಿಮಗೆ ಪರಿಹಾರ ಹಣ ಸಿಗುವುದಿಲ್ಲ ತಿಳಿಯಿರಿ ರೈತರೇ, ನಿಮ್ಮ ಹೊಲದ ಇಷ್ಟು ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಿದ್ದೀರಾ ಇಲ್ಲವಾ ಎಂಬುದನ್ನು ಇಲ್ಲಿ ಚೆಕ್ ಮಾಡಿಕೊಳ್ಳಿ.

ಎಲ್ಲ ರೈತರು ನೋಡಲೇಬೇಕಾದ ಮಾಹಿತಿ ಇದು :- ರೈತ ಬಾಂಧವರೇ ಈ ಕೂಡಲೇ ನಿಮ್ಮ ಹೊಲದ ಪಹಣಿಯೊಂದಿಗೆ ಫ್ರೂಟ್ಸ್ ಐಡಿಯನ್ನು ಹಾಗೂ ಹೊಲದ ಪಹಣಿ ಜೊತೆ ಲಿಂಕ್ ಮಾಡಬೇಕು. ಇಲ್ಲವಾದಲ್ಲಿ ನಿಮಗೆ ಬರ ಪರಿಹಾರದ ಹಣ ಬರುವುದಿಲ್ಲ. ಹಾಗಾಗಿ ತಪ್ಪದೇ ನಿಮ್ಮ ಹೊಲದ ಪಹಣಿಯ ಜೊತೆ ಫ್ರೂಟ್ಸ್ ಐಡಿಯನ್ನು ಲಿಂಕ್ ಮಾಡಿ. ನಿಮ್ಮ ನಿಮ್ಮ ಹೊಲದ ಎಲ್ಲಾ ಸರ್ವೆ ನಂಬರನ್ನು ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ದಾಖಲಿಸಿ. ತಪ್ಪದೇ ಬರ ಪರಿಹಾರವನ್ನು ಪಡೆಯಿರಿ.

ಒಂದು ವೇಳೆ ನಿಮ್ಮ ಹೊಲ 8 ಅಥವಾ 10 ಎಕರೆ ಇದ್ದು ನೀವು ಕೇವಲ ಎರಡು ಎಕರೆ ಹೊಲವನ್ನು ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ದಾಖಲಿಸಿದರೆ ನಿಮಗೆ ಕೇವಲ ಎರಡು ಎಕರೆಗೆ ಸೀಮಿತವಾದ ಬರ ಪರಿಹಾರದ ಹಣವನ್ನು ಹಾಕುತ್ತಾರೆ. ಆದಕಾರಣ ನಿಮ್ಮ ಸರ್ವೇ ನಂಬರ್ ಗಳನ್ನು ತಪ್ಪದೇ ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಿ. ನಿಮ್ಮ ಎಷ್ಟು ಸರ್ವೇ ನಂಬರ್ ಗಳು ಫ್ರೂಟ್ಸ್ ಅಡಿಯಲ್ಲಿ ದಾಖಲಾಗಿವೆ ಇಲ್ಲಿ ಚೆಕ್ ಮಾಡಿಕೊಳ್ಳಿ. ದಯವಿಟ್ಟು ಬರ ಪರಿಹಾರವನ್ನು ಪಡೆಯಿರಿ..

👆👆ಈ ಮೇಲಿರುವ ಹಿರೇಹುಲ್ಲಾಳ ಗ್ರಾಮದ ರೈತರು 3 ದಿನಗಳ ಒಳಗಾಗಿ FID ಮಾಡಿಸಿಕೊಳ್ಳಲು ತಿಳಿಸಿದೆ ಮಾಡಿಸದೇ ಇದ್ದರೆ ರೈತರಿಗೆ ಬೆಳೆ ಹಾನಿ ಬೆಳೆ ಪರಿಹಾರ ಬೆಳೆ ವಿಮೆ ಇನ್ನಿತರೇ ಯಾವುದೇ ಪರಿಹಾರ ಬರುವುದಿಲ್ಲ FID ಮಾಡಿಸಲು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಮತ್ತು ರೈತ ಸಂಪರ್ಕ ಕೇದ್ರಕ್ಕೆ ತೆರಳಿ FID ಮಾಡಿಸಲು ಸೂಚಿಸಿದೆ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಆಡಳಿತ ಅಧಿಕಾರಿಗಳನ್ನು ಬೆಟ್ಟಿ ಮಾಡಿ ತಿಳಿಯಿರಿ.

ಯಾಕೆ ನಮಗೆ ಬರ ಪರಿಹಾರ ಬರುವುದಿಲ್ಲ? ಕಾರಣ ತಿಳಿಯಿರಿ 👇🏻

ಈ ಲಿಸ್ಟ್ ನಲ್ಲಿ ಇರುವ ತಾಲೂಕುಗಳಿಗೆ ಬರ ಪರಿಹಾರ ಬರುವುದು ಅನುಮಾನ..ಹಾಗೂ ಈ ಲಿಸ್ಟ್ ನಲ್ಲಿರುವ ರೈತರಿಗೂ ಕೂಡ ಹಣ ಬರುವುದಿಲ್ಲ..ನಿಮಗೆ ಬರ ಪರಿಹಾರ ಬೇಕಿದ್ದಲ್ಲಿ ತಪ್ಪದೆ ಕೊನೆಯವರೆಗೂ ಲೇಖನವನ್ನು ಓದಿ ನಿಮ್ಮ ತಾಲೂಕು ಇದೆಯೇ ಖಚಿತಪಡಿಸಿಕೊಳ್ಳಿ. ಹಾಗೂ ನಿಮಗೆ ಬರ ಪರಿಹಾರ, ಬೆಳೆ ವಿಮೆ, ಬೆಳೆ ಹಾನಿ ಹಣ ಬರಬೇಕೆಂದರೆ ಈ ಕೆಲಸ ತಪ್ಪದೆ ಮಾಡಿ.. ನಿಮ್ಮ ಎಫ್ ಐ ಡಿ ಸ್ಟೇಟಸ್ ಅನ್ನು ತಪ್ಪದೇ ನಿಮ್ಮ ವ್ಯಾಪ್ತಿಗೆ ಬರುವ ಗ್ರಾಮ ಲೆಕ್ಕಾಧಿಕಾರಿಗಳ ಹತ್ತಿರ ಹೋಗಿ ಪರಿಶೀಲನೆ ಮಾಡಿ ಕೊಳ್ಳಿ.

➡️ ನಿಮ್ಮ ಮೊಬೈಲ್ ನಲ್ಲೇ FID ನೊಂದಣಿ ಮಾಡುವುದು ಹೇಗೆ??

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ https://fruits.karnataka.gov.in/OnlineUserLogin.aspx

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.”Citizen Registration” ಮೇಲೆ ಕ್ಲಿಕ್ ಮಾಡಿ.

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,l agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.

ನಂತರ ನಿಮ್ಮ ಮೊಬೈಲ್ ನಂಬರ್, ಇಮೇಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬಂದಿರುವ ಒಟಿಪಿ OTP ಅನ್ನು ಅಲ್ಲಿ ಹಾಕಿ, ನಂತರ Submit ಮೇಲೆ ಕ್ಲಿಕ್ ಮಾಡಬೇಕು.

ನಂತರ ನೀವು Password create ಮಾಡಿಕೊಂಡು ಮುಂದೆ ಲಾಗಿನ್ ಆಗಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿದರೆ ನಿಮ್ಮ FID (ಫ್ರೂಟ್ಸ್ ಐ ಡಿ) ನಿಮಗೆ ಸಿಗಲಿದೆ.

➡️ 🙏🏻 ನಿಮ್ಮ ಹೊಲದ ಎಷ್ಟು ಸರ್ವೇ ನಂಬರಗಳು ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿ ಯಾಗಿವೆ ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻👇🏻

ಮೊದಲಿಗೆ ಈ ಕಡೆಗೆ ತೋರಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ👇🏻

https://fruits.karnataka.gov.in/OnlineUserLogin.aspx

ನಂತರ ಮುಂದಿನ ಮುಖಪುಟದಲ್ಲಿ ಕಾಣುವ ಹಾಗೆ ಸರ್ಚ್ search ಮೇಲೆ ಒತ್ತಿದರೆ ಅಲ್ಲಿ ನೀವು ರಿಜಿಸ್ಟ್ರೇಷನ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು.

➡️ ಅದೇ ರೀತಿಯಾಗಿ ನೀವು ಅಲ್ಲಿ ಕಾಣುವ (registration status) ಮೇಲೆ ಕ್ಲಿಕ್ ಮಾಡಿದರೆ.

ನಿಮ್ಮ ಹೊಲದ ಇಷ್ಟು ಸರ್ವೇ ನಂಬರ್ ಗಳು ಅಲ್ಲಿ ನೋಂದಣಿ ಯಾಗಿವೆ ಎಂಬ ಮಾಹಿತಿ ನಿಮಗೆ ಸಿಗುತ್ತದೆ.

ಒಂದು ವೇಳೆ ನಿಮ್ಮ ಹೊಲ 7 ಎಕರೆ ಇದ್ದಲ್ಲಿ ನೀವು ಕೇವಲ ಎರಡು ಎಕರೆ ನೊಂದಣಿ ಮಾಡಿದರೆ ನಿಮಗೆ ಬರ ಪರಿಹಾರವಾಗಿ ಎರಡು ಎಕರೆಗೆ ಸೀಮಿತವಾದ ಹಣ ಅಷ್ಟೇ ಬರುತ್ತದೆ. ಹಾಗಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ನೀವು ತಪ್ಪದೆ ನಿಮ್ಮ ಹೊಲದ ಸಂಪೂರ್ಣ ಮಾಹಿತಿಯನ್ನು ನೋಂದಣಿ ಮಾಡಬೇಕು.

ಹೀಗೆ ಬಂದಿರುವ FID ಯನ್ನು ಕೃಷಿ ಇಲಾಖೆ,ರೇಷ್ಮೆ, ಅಥವಾ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ನಂತರ FID ಯನ್ನು ಪಿ ಎಂ ಕಿಸಾನ್ ಯೋಜನೆ, ಬೆಳೆಸಾಲ, ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ನೀವು ಈ FID ಅನ್ನು ಬಳಸಬಹುದು.

➡️ ಈ ಕೆಲಸ ಮಾಡಿದರೆ ಮಾತ್ರ ಬರ ಪರಿಹಾರ ಹಣ ನಿಮಗೆ ಜಮೆ ಆಗುತ್ತದೆ.

ಬರ ಪರಿಹಾರದ ಹಣ ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್‌ಐಡಿ ಮಾಡಿಸಲೇಬೇಕು. ಒಂದು ವೇಳೆ ಎಫ್‌ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್‌ಐಡಿ ಮಾಡದೆ ಇರುವ ಕೂಡಲೇ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್‌ಐಡಿ ಮಾಡಿಸಬೇಕು.

➡️ ಆಧಾರ್ ನಂಬರ್ ಹಾಕಿ ನಿಮ್ಮ FID ಸ್ಟೇಟಸ್ ತಿಳಿದುಕೊಳ್ಳಿ👇🏻 ನಿಮ್ಮ ಎಫ್ ಐ ಡಿ ಜನರೇಟ್ ಆಗಿದೆಯೋ ಇಲ್ಲವೋ ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻

ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx

ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಎಫ್ ಐ ಡಿ ಜನರೇಟ್ ಆಗಿರುವುದು ನಿಮಗೆ ಕಾಣುತ್ತದೆ…

ಈವರೆಗೆ ಎಫ್‌ಐಡಿ ಮಾಡಿಸದೇ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್‌ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.

ನಿಮ್ಮ ಪರಿಹಾರ ಹಣ ಜಮಾ ಆಗಿದ್ದರೆ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿಕೊಳ್ಳಿ ಮೊದಲಿಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ..👇🏻

https://landrecords.karnataka.gov.in/PariharaPayment/

ಈ ಮೇಲಿನ ಲಿಂಕನ್ನು ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕಾಣಿಸುವ ಹಾಗೆ ಮೊದಲು ಆಧಾರ್ ನಂಬರನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ calamity type ಇದ್ದಲಿ drought ಎಂದು ಹಾಕಿ ವರ್ಷವನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಪಡೆಯಲು ವರ್ಷವನ್ನು ಆಯ್ಕೆ ಮಾಡಿ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಎಂಟ್ರಿ ಮಾಡಿ ನಿಮ್ಮ ಪರಿಹಾರದ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಿ.

➡️ ಈ ರೈತರ ಸಾಲ ಮನ್ನಾ ಪಟ್ಟಿ ಬಿಡುಗಡೆ ನಿಮಗೆ ಎಷ್ಟು ಸಾಲ ಮನ್ನಾ ಆಗಿದೆ ಇಲ್ಲಿ ನೋಡಿ 🙏🏻👇🏻

ವಾಣಿಜ್ಯ ಬ್ಯಾಂಕ್ ಸಾಲ ಪಡೆದ ರೈತರ ಪಟ್ಟಿ ಯನ್ನು ಇಲ್ಲಿ ನೋಡಿ?? ನಿಮ್ಮ ಹೆಸರಿದೆಯೆ ಇಲ್ಲಿ ಚೆಕ್ ಮಾಡಿಕೊಳ್ಳಿ..

https://mahitikanaja.karnataka.gov.in/Revenue/LoanWaiverReportBANKNew?ServiceId=2059&Type=TABLE&DepartmentId=2066

ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ

ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..

➡️ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳ ನಿಮ್ಮ ಸಾಲ ಮನ್ನಾ ಎಷ್ಟು ಆಗಿದೆ ಎಂದು ಇಲ್ಲಿ ಚೆಕ್ ಮಾಡಿಕೊಳ್ಳಿ..

https://mahitikanaja.karnataka.gov.in/Revenue/LoanWaiverReportPACSNew?ServiceId=2060&Type=TABLE&DepartmentId=2066

ನಂತರ ಅಲ್ಲಿ ರೈತ ಎಂದು ಸೆಲೆಕ್ಟ್(select) ಮಾಡಿಕೊಳ್ಳಿ

ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸಲ್ಲಿಸು” ಮೇಲೆ ಒತ್ತಿರಿ..

ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/D6bfj7BBl7lLxTGZOcd2Mh

ಸರ್ವೇ ನಂಬರ್ ಗೆ ನಿಮ್ಮ ಎಫ್ ಐ ಡಿ ಲಿಂಕ್ ಆಗಿರುವುದನ್ನು ಚೆಕ್ ಮಾಡಿಕೊಳ್ಳಿ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಲಿಸ್ಟ್ ನಲ್ಲಿ ಇದ್ದವರಿಗೆ ಬರ ಪರಿಹಾರ ಬರುವುದಿಲ್ಲ ಕುರಿತು ನೀಡಿದ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ..

Leave a Reply

Your email address will not be published. Required fields are marked *