RTC pahani Aadhaar link in mobile :- ಸಣ್ಣ, ಅತಿ ಸಣ್ಣ ರೈತರನ್ನು ಗುರುತಿಸಲು ಆಧಾರ್ ಜೊತೆ ಪಹಣಿ ಜೋಡಣೆ..

ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಸಣ್ಣ ಹಾಗೂ ಅತಿ ಸಣ್ಣ ರೈತರನ್ನು ಗುರುತಿಸಲು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರವರು ಹೊಲದ ಪಹಣಿಯ ಜೊತೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಎಂದು ಹೇಳಿದ್ದಾರೆ.

ಹೊಲದ ಪಹಣಿ ಹಾಗೂ ಆಧಾರ್ ಲಿಂಕ್ ಮಾಡುವುದು ಏಕೆ??

ಹೌದು ರೈತರೆ ಈಗ ಆಗಲೇ ಕಂದಾಯ ಸಚಿವರು ಹೇಳಿದ ಪ್ರಕಾರ ಹೊಲದ ಪಹಣಿಯ ಜೊತೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ. ನಿಮ್ಮ ಹೊಲದ ಸರ್ವೆ ನಂಬರ್ ಮೂಲಕ ನಿಮಗೆ ಎಷ್ಟು ಹಣ ಬರುತ್ತದೆ ಎಂದು ಲೆಕ್ಕ ಹಾಕಲು ಇದು ಬಹಳ ಉಪಯೋಗಕರವಾಗಿದೆ. ಆದ್ದರಿಂದ ನಿಮ್ಮ ಹೊಲದ ಪಹಣಿಯ ಜೊತೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ.

ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಗುರುತಿಸಿ ಪರಿಹಾರ ಕ್ರಮಗಳನ್ನು ವಿತರಿಸುವ ಉದ್ದೇಶದಿಂದ ಕರ್ನಾಟಕವು ಎಲ್ಲಾ ಹಕ್ಕುಗಳು, ಹಿಡುವಳಿ ಮತ್ತು ಬೆಳೆಗಳ (ಆರ್‌ಟಿಸಿ) ದಾಖಲೆಗಳನ್ನು ಆಧಾರ್‌ನೊಂದಿಗೆ ಜೋಡಿಸಲು ಯೋಜಿಸುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಇದರಿಂದಾಗಿ ಭೂ ಸಂಬಂಧ ವಂಚನೆಗಳನ್ನು ಕಡಿಮೆ ಮಾಡುವುದು ಮತ್ತು ಮಾಲೀಕತ್ವಕ್ಕೆ ಬಂದಾಗ ಗೊಂದಲವನ್ನು ನಿವಾರಣೆ ಮಾಡುವ ಅನುಕೂಲಗಳನ್ನು ಇದು ಹೊಂದಿರುತ್ತದೆ. ವಿಧಾನಸಭೆಯಲ್ಲಿ ಬರಗಾಲದ ಮೇಲಿನ ಚರ್ಚೆಗೆ ಉತ್ತರಿಸಿದ ಗೌಡರು, ಕೇಂದ್ರ ಸರ್ಕಾರದ ಅಂಕಿಅಂಶಗಳು ಕರ್ನಾಟಕದ ಶೇಕಡಾ 44 ರಷ್ಟು ರೈತರು ಸಣ್ಣ ಮತ್ತು ಅತಿ ಸಣ್ಣ ರೈತರು (ಎರಡು ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಹೊಂದಿರುವವರು) ಎಂದು ಹೇಳಿದ್ದಾರೆ.

ಪಹಣಿಗೆ ಆಧಾರ್ ಸೀಡಿಂಗ್ ಕಡ್ಡಾಯ:-

ಸರ್ಕಾರದ ಸೌಲಭ್ಯಗಳನ್ನು ಸಮಯಕ್ಕೆ ಸರಿಯಾಗಿ ಪಡೆಯಲು, ರೈತರು ತಮ್ಮ ಪಹಣಿಗಳನ್ನು ಆಧಾರ್ ಜೊತೆಗೆ ಜೋಡಿಸಬೇಕು ಎಂದು ಕರ್ನಾಟಕ ಸರ್ಕಾರ ತಿಳಿಸಿದೆ.

ಪಹಣಿಗೆ ಆಧಾರ್ ಲಿಂಕ್ ಹೇಗೆ ಮಾಡಬಹುದು?👇🏻💚

ರೈತರು ತಮ್ಮ ಜಮೀನಿನ ಪಹಣಿ ಮತ್ತು ಆಧಾರ್ ದಾಖಲಾತಿಗಳೊಂದಿಗೆ landrecords.karnataka.gov.in/service ವೆಬ್‌ಸೈಟ್‌ಗೆ ಲಾಗಿನ್ ಮಾಡಬಹುದು.

ನಂತರ, ಪಹಣಿಯನ್ನು ಆಧಾರ್ ಜೊತೆಗೆ ಲಿಂಕ್ ಮಾಡಬಹುದು.

ಗ್ರಾಮ ಅಧಿಕಾರಿಗಳ ಮೂಲಕ :-

ರೈತರು ತಮ್ಮ ಪಹಣಿ ಮತ್ತು ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಅಧಿಕಾರಿಗಳು ಪಹಣಿಯನ್ನು ಆಧಾರ್ ಜೊತೆಗೆ ಜೋಡಿಸಲು ಸಹಾಯ ಮಾಡುತ್ತಾರೆ.

ನಿಮ್ಮ ಹೊಲದ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮೊಬೈಲ್ ನಲ್ಲಿ ಮಾಡುವುದು ಹೇಗೆ? ಇಲ್ಲಿ ನೋಡಿ 👇🏻

ಮೊದಲನೆಯದಾಗಿ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ 👇🏻 https://landrecords.karnataka.gov.in/

ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು Captcha Code ಎಂಟ್ರಿ ಮಾಡಿ.

ನಂತರ ಅಲ್ಲೇ ಕೆಳಗೆ ಕಾಣುವ Send OTP ಮೇಲೆ ಕ್ಲಿಕ್ ಮಾಡಿ.

ನಿಮ್ಮ ಮೊಬೈಲ್ ಸಂಖ್ಯೆಗೆ ಬಂದ OTP ಯನ್ನು ಅಲ್ಲಿ ನಮೂದಿಸಿ.

ನಿಮ್ಮ ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರನ್ನು ನಮೂದಿಸಿ.

ನಾನು ಇಲ್ಲಿ ಸ್ವಯಂ ಪ್ರೇರಣೆಯಿಂದ ಆಧಾರ ಗಾಗಿ ನನ್ನ ಒಪ್ಪಿಗೆಯನ್ನು ನೀಡುತ್ತೇನೆ” ಎಂಬ ಚೌಕದ ಮೇಲೆ ಕ್ಲಿಕ್ ಮಾಡಿ. “Verify” ಮೇಲೆ ಕ್ಲಿಕ್ ಮಾಡಿ.

“ಆಧಾರವನ್ನು ಯಶಸ್ವಿಯಾಗಿ ಪರಿಶೀಲಿಸಲಾಗಿದೆ” ಎಂಬ ಸಂದೇಶ ಕಾಣಿಸುತ್ತದೆ.

FETCH Details” ಮೇಲೆ ಕ್ಲಿಕ್ ಮಾಡಿ.

ಇಷ್ಟು ಮಾಡಿದರೆ ನಿಮ್ಮ ಆರ್.ಟಿ.ಸಿ ಗೆ ಆಧಾರ್ ಲಿಂಕ್ ಆಗಿದೆ ಎಂದು ಖಚಿತ. ಈ ಪ್ರಕ್ರಿಯೆ ಉಚಿತ, ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು ಮತ್ತು ಪಹಣಿ ಯಲ್ಲಿರುವ ಹೆಸರು ಒಂದೇ ಆಗಿರಬೇಕು.

ಬರ ಪರಿಹಾರಕ್ಕಾಗಿ ಆಧಾರ್ ಲಿಂಕ್(Aadhar link for drought relief):

ರಾಜ್ಯದ ಬರಗಾಲ ಪೀಡಿತ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಚುರುಕುಗೊಂಡಿದ್ದು, 2012 ರ ಬರದಲ್ಲಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ತಾತ್ಕಾಲಿಕ ಪರಿಹಾರ ಧನ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಪರಿಹಾರ ಧನ ರೈತರ ಖಾತೆಗೆ ನೇರವಾಗಿ ಜಮಾ ಮಾಡಲು, ರೈತರ ಆಧಾರ್ ಸಂಖ್ಯೆಯನ್ನು ಭೂಮಿ ದಾಖಲೆಗಳೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಆಧಾರ್ ಲಿಂಕ್ ಆಗದೇ ಇರುವ ರೈತರು ತಕ್ಷಣ ಆಧಾರ್ ಲಿಂಕ್ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಟ್ವಿಟ್ ಮಾಡಿದ್ದಾರೆ.

ನಿಮ್ಮ ಖಾತೆಗೆ ಹಣ ಜಮಾ ಆಗಲು, ಮೊದಲು ನಿಮ್ಮ ಆಧಾರ್ ಲಿಂಕ್ ಆಗಿದೆಯೇ ಎಂದು ಪರಿಶೀಲಿಸಬೇಕು. ಲಿಂಕ್ ಆಗಿಲ್ಲದಿದ್ದರೆ, ಈ ಕೆಳಗಿನ ಹಂತಗಳನ್ನು ಅನುಸರಿಸಿ:

ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!

ನಿಮ್ಮ ಮೊಬೈಲ್ ನಲ್ಲಿ ಫ್ರೂಟ್ಸ್ ಜಾಲತಾಣದ ಅಡಿಯಲ್ಲಿ ನೀವು ನಿಮ್ಮ ಜಿಲ್ಲೆಯ ಎಲ್ಲಾ ವಿವರವನ್ನು ಹಾಕಿ ಕೆಳಗೆ ಕೊಟ್ಟಿರುವ ಎಲ್ಲಾ ಹಂತಗಳನ್ನು ತಪ್ಪದೇ ಪಾಲಿಸಿ, ಹಳ್ಳಿಯವರು ರೈತರ ಪಟ್ಟಿ ಬಿಡುಗಡೆಯಾಗಿದೆ ಅದರಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ.

ಅದೇ ರೀತಿ ಆಗಿ ನಿಮಗೆ ಕೆಳಗೆ ತೋರಿಸಿದ ಪಟ್ಟಿ ಪಿಎಂ ಕಿಸಾನ್ ಯೋಜನೆಯಲ್ಲಿ ನೊಂದಾಯಿತ ಗೊಂಡ ರೈತರ ಪಟ್ಟಿಯಾಗಿರುತ್ತದೆ ಅದೇ ರೀತಿ ಅದರ ಮೂಲಕ ರೈತರ ಖಾತೆಗೆ ಡಿಬಿಟಿ ಮುಖಾಂತರ ಹಣವನ್ನು ಹಾಕಲಾಗುತ್ತದೆ.

ನಿಮ್ಮ ಹೆಸರನ್ನು ಚೆಕ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ!👇🏻

➡️ ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/FarmerDeclarationReport.aspx

ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಹಾಗೂ ನಿಮ್ಮ ಹಳ್ಳಿಯನ್ನು ಆಯ್ಕೆ ಮಾಡಿಕೊಂಡು. ವೀಕ್ಷಿಸು ಇದರ ಮೇಲೆ ಕ್ಲಿಕ್ ಮಾಡಿರಿ..

ಆ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಅಂತಹ ರೈತರಿಗೆ ಯಾವುದೇ ಕಾರಣಗಳಿಲ್ಲದೆ ಪರಿಹಾರದ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡಲಾಗುತ್ತದೆ.

ಹಂತ 2) :- ಅದೇ ರೀತಿಯಾಗಿ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ನಿಮ್ಮ ಬರ ಪರಿಹಾರ ಹಣದ ಬಗ್ಗೆ ಮಾಹಿತಿ ಪಡೆಯಿರಿ.. ಈಗಾಗಲೇ ನಿಮಗೆ ತಿಳಿದ ಹಾಗೆ ಫ್ರೂಟ್ಸ್ ಐಡಿಯನ್ನು ಎಲ್ಲ ರೈತರಿಗೆ ಕಡ್ಡಾಯವಾಗಿ ಮಾಡಿದೆ. ಕೇವಲ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸುವುದರ ಮೂಲಕ ನಿಮ್ಮ ಫ್ರೆಂಡ್ಸ್ ಐ ಡಿ ಜನರೇಟ್ ಆಗಿದಿಯೋ ಇಲ್ಲವೋ ನಿಮ್ಮ Data ಸ್ಥಿತಿಯನ್ನು ಅಲ್ಲೇ ತಿಳಿಯಿರಿ…

Step 1:- ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಸಂಖ್ಯೆಯನ್ನು ಅಲ್ಲಿ ನಮೂದಿಸಿ ಸರ್ಚ(search) ಬಟನ್ ಮೇಲೆ ಒತ್ತಬೇಕು..

Step 2:- ಅದೇ ರೀತಿಯಾಗಿ ನಿಮಗೆ ಕೆಳಗೆ ತೋರಿಸುವ ಎಫ್ ಐ ಡಿ ನಂಬರ್ ಇದ್ದರೆ ಮಾತ್ರ ನಿಮ್ಮ data ಸ್ಥಿತಿ ಸರಿಯಾಗಿರುತ್ತದೆ, ನಿಮ್ಮ ಎಫ್ ಐ ಡಿ ತಪ್ಪಿದ್ದಲ್ಲಿ ನಿಮಗೆ ರೆಕಾರ್ಡ್ ನಾಟ್ ಫೌಂಡ್(Record not found) ಎಂದು ಬರುತ್ತದೆ.. ಅಂತಹ ರೈತರಿಗೆ ಬರ ಪರಿಹಾರ ಹಣ ಜಮಯ ಆಗುವುದಿಲ್ಲ ನೀವು ತಪ್ಪದೆ ನಿಮ್ಮ ಹತ್ತಿರದಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆಯನ್ನು ಬೇಟಿಯಾಗಿ ನಿಮ್ಮ ಅಗತ್ಯ ದಾಖಲೆಗಳ ಮೂಲಕ ನಿಮ್ಮ ಫ್ರೂಟ್ಸ್ ಐಡಿ ಯನ್ನು ಜನರೇಟ್ ಮಾಡಿಕೊಳ್ಳಿ ನಂತರ ನಿಮಗೆ ಬರ ಪರಿಹಾರ ಹಣವನ್ನು ಹಾಕಲಾಗುತ್ತದೆ.

ನಿಮ್ಮ ಆಧಾರ್ ಬ್ಯಾಂಕ್ ಲಿಂಕ್ ಆಗಿರುವ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಇಲ್ಲಿದೆ ನೋಡಿರಿ 👇🏻

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್

https://uidai.gov.in/en/

ನಂತರ ಮುಂದಿನ ಮುಖಪುಟದಲ್ಲಿ ಕಾಣುವ ಹಾಗೆ ಆಧಾರ್ ಸರ್ವಿಸಸ್(Adhaar services) ಅದರ ಮೇಲೆ ಕ್ಲಿಕ್ ಮಾಡಿ..

ನಂತರ ಮುಂದೆ ಕಾಣುವ ಮುಖಪುಟದಲ್ಲಿ ಆಧಾರ್ ಲಿಂಕಿಂಗ್ ಸ್ಟೇಟಸ್ (Adhaar Linking status) ಮೇಲೆ ಕ್ಲಿಕ್ ಮಾಡಿ

ನಂತರ ಅದೇ ಮುಖಪುಟದಲ್ಲಿ ಕೆಲಗೆ ಕಾಣುವ ಹಾಗೆ ಬ್ಯಾಂಕ್ ಸೀಡಿಂಗ್ ಸ್ಟೇಟಸ್ (bank seeding status ) ಮೇಲೆ ಕ್ಲಿಕ್ ಮಾಡಿ..

ನಂತರ ಅಲ್ಲಿ ಲಾಗಿನ್ ಕೇಳುತ್ತದೆ ನಿಮ್ಮ ಆಧಾರ್ ಸಂಖ್ಯೆ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಮತ್ತು ನಿಮ್ಮ ಮೊಬೈಲ್ ಬಗ್ಗೆ ಬಂದಿರುವ ಓಟಿಪಿಯನ್ನು ಹಾಕಿ ಲಾಗಿನ್ ಆಗಿ..

ನಂತರ ಅದೇ ಬ್ಯಾಂಕ್ ಸಿಡಿಂಗ್ ಸ್ಟೇಟಸ್ ಮೇಲೆ ಇನ್ನೊಮ್ಮೆ ಒತ್ತಿ.. ನಂತರ ಅಲ್ಲಿ ನಿಮ್ಮ ಸ್ಟೇಟಸ್ ಆಕ್ಟಿವ್ ಎಂದು ಬಂದರೆ ನಿಮಗೆ ಬರ ಪರಿಹಾರದ ಹಣ ಆಗುತ್ತದೆ..

ಈ ರೀತಿ ಎಲ್ಲಾ ಜಿಲ್ಲೆಗಳ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ, ಕೂಡಲೇ ಸಂಬಂಧಪಟ್ಟ ಬ್ಯಾಂಕ್ಗಳಿಗೆ ಭೇಟಿ ನೀಡಿ. ಆಧಾರ್ ಲಿಂಕ್ ಮಾಡಿಸಿ.

ನಿಮ್ಮ ಆಧಾರ್ ಲಿಂಕ್ ಆದ ನಂತರ, ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ.

NPCI ಸ್ಥಿತಿ “ಆಕ್ಟಿವ್(Active)” ಎಂದು ತೋರಿಸಿದರೆ, ನಿಮ್ಮ ಆಧಾರ್ ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗಿದೆ ಎಂಬರ್ಥ. ನೀವು ಬೆಳೆ ಹಾನಿ, ಬೆಳೆ ವಿಮೆ ಮತ್ತು PM ಕಿಸಾನ್ ಯೋಜನೆಯಂತಹ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿದ್ದೀರಿ.

ನಿಮ್ಮ NPCI ಸ್ಥಿತಿ/ಸ್ಟೇಟಸ್ ಹೀಗೆ ಚೆಕ್ ಮಾಡಿಕೊಳ್ಳಿ

https://fruits.karnataka.gov.in/ ಗೆ ಭೇಟಿ ನೀಡಿ.

“ಸಿಟಿಜನ್ ರಿಜಿಸ್ಟ್ರೇಷನ್(Citizen Registration ” ಮೇಲೆ ಕ್ಲಿಕ್ ಮಾಡಿ.

ನಿಮ್ಮ ಆಧಾರ್ ಸಂಖ್ಯೆ ಮತ್ತು ಹೆಸರನ್ನು ನಮೂದಿಸಿ.

ಮುಂದುವರಿಯಿರಿ” ಕ್ಲಿಕ್ ಮಾಡಿ.

ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸವನ್ನು ನಮೂದಿಸಿ.

OTP ಯನ್ನು ನಮೂದಿಸಿ ಮತ್ತು “ಸಲ್ಲಿಸಿ” ಕ್ಲಿಕ್ ಮಾಡಿ.

ಪಾಸ್‌ವರ್ಡ್ ರಚಿಸಿ (Create password) ಮತ್ತು ಲಾಗಿನ್ ಮಾಡಿ.

ಮುಖಪುಟದಲ್ಲಿ, (Search)” ಮೇಲೆ ಕ್ಲಿಕ್ ಮಾಡಿ ಮತ್ತು “NPCI ಚೆಕ್” ಆಯ್ಕೆಮಾಡಿ.

ನಿಮ್ಮ NPCI ಸ್ಥಿತಿಯನ್ನು ನೀವು ನೋಡಬಹುದು.

NPCI ಸ್ಥಿತಿ “ನಿಷ್ಕ್ರಿಯ (Inactive)” ಎಂದು ತೋರಿಸಿದರೆ, ನಿಮ್ಮ ಆಧಾರ್ ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗಿಲ್ಲ ಎಂದರ್ಥ. ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು, ನಿಮ್ಮ ಬ್ಯಾಂಕ್‌ಗೆ ಭೇಟಿ ನೀಡಿ ಮತ್ತು NPCI ಮ್ಯಾಪಿಂಗ್(Mapping) ಮಾಡಿಸಿ.

“ವಾಸ್ತವದಲ್ಲಿ, ರಾಜ್ಯದ 70 ಪ್ರತಿಶತದಷ್ಟು ರೈತರು ಸಣ್ಣ ಮತ್ತು ಅತಿ ಕಡಿಮೆ” ಎಂದು ಕೃಷ್ಣ ಬೈರೇಗೌಡ ಹೇಳಿದರು. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನಾವು ಒದಗಿಸಿದ ಆಧಾರ್ ಆಧಾರಿತ ಡೇಟಾದೊಂದಿಗೆ ಬರ ಪರಿಹಾರವನ್ನು ಲೆಕ್ಕ ಹಾಕಲು ನಾವು ಕೇಂದ್ರವನ್ನು ಒತ್ತಾಯಿಸಿದ್ದೇವೆ ಎಂದು ಹೇಳಿದ್ದಾರೆ.

“ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ನಾವು ಎಲ್ಲಾ ಆರ್‌ಟಿಸಿಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು ಮತ್ತು ಆಧಾರ್ ದೃಢೀಕರಣವನ್ನು ಬಳಸಲು ಯೋಚಿಸುತ್ತಿದ್ದೇವೆ” ಎಂದು ವಿಧಾನಸಭೆಗೆ ತಿಳಿಸಿದರು.

ಪಹಣಿಯು ಮಾಲೀಕರ ವಿವರಗಳು, ವಿಸ್ತೀರ್ಣ, ಮಣ್ಣಿನ ಪ್ರಕಾರ, ಭೂಮಿಯ ಸ್ವಾಧೀನದ ಸ್ವರೂಪ, ಒತ್ತುವರಿ, ಬೆಳೆದ ಬೆಳೆಗಳು ಮತ್ತು ಮುಂತಾದ ಮಾಹಿತಿಯನ್ನು ಒಳಗೊಂಡಿದೆ.

ಅನುಮತಿ ಇಲ್ಲದೆ ಪತಿಯ ಆಧಾರ್ ಕಾರ್ಡ್‌ ವಿವರ ಪತ್ನಿ ಪಡೆಯುವಂತಿಲ್ಲ- ಹೈಕೋರ್ಟ್ ಆದೇಶಅನುಮತಿ ಇಲ್ಲದೆ ಪತಿಯ ಆಧಾರ್ ಕಾರ್ಡ್‌ ವಿವರ ಪತ್ನಿ ಪಡೆಯುವಂತಿಲ್ಲ- ಹೈಕೋರ್ಟ್ ಆದೇಶ

ಆಂಧ್ರಪ್ರದೇಶದಲ್ಲಿ ಈಗಾಗಲೇ ಜಾರಿ

ಆಂಧ್ರಪ್ರದೇಶದಲ್ಲಿ ಈಗಾಗಲೇ ಆಧಾರ್ ಜೊತೆ ಪಹಣಿಯನ್ನು ಲಿಂಕ್ ಮಾಡಲಾಗಿದೆ. ಕೇವಲ ಆಧಾರ್ ಲಿಂಕ್ ಮಾಡಿದರೆ ಸಾಕಾಗುವುದಿಲ್ಲ. ಆಧಾರ್ ದೃಢೀಕರಣವನ್ನು ಮಾಡದ ಹೊರತು, ನಾವು ಭೂ ವ್ಯವಹಾರಗಳಲ್ಲಿ ವಂಚನೆಗಳನ್ನು ತಡೆಯಲು ಸಾಧ್ಯವಿಲ್ ಎಂದರು.

ರೈತರಿಗೆ ಪರಿಹಾರ ವಿತರಣೆಯಲ್ಲಿ ಸರ್ಕಾರ “ಎಂಡ್ ಟು ಎಂಡ್ ಆಟೋಮೇಷನ್” ಪ್ರಕ್ರಿಯೆಯಲ್ಲಿದೆ ಎಂದು ವಿಧಾನಸಭೆಯಲ್ಲಿ ಸಚಿವರು ಹೇಳಿದರು. ಇಲ್ಲಿಯವರೆಗೆ, ಡಾಟಾ ಎಂಟ್ರಿ ಆಪರೇಟರ್‌ಗಳು ಫಲಾನುಭವಿಗಳ ಹೆಸರನ್ನು ನಮೂದಿಸುತ್ತಿದ್ದರಿಂದ ಅಕ್ರಮ ನಡೆಯುತ್ತಿತ್ತು ಎಂದು ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಹೋದರನನ್ನು ಒಳಗೊಂಡ ಒಂದು ಉದಾಹರಣೆಯನ್ನು ಉಲ್ಲೇಖಿಸಿದರು. ”ಅಂದಿನ ಸಿಎಂ ಸಹೋದರನ ಹೆಸರಿಗೆ ನೋಂದಾಯಿತ ಭೂಮಿಗೆ ಪರಿಹಾರ ನೀಡುವುದು ಬೇರೆ ಯಾವುದೋ ಜಿಲ್ಲೆಯ ಹೆಸರಿಗೆ ಹೋಯಿತು” ಎಂದು ಮಾಹಿತಿ ನೀಡಿದರು.

ನೇರವಾಗಿ ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡಲಾಗುವುದು ಎಂದು ಅವರು ಹೇಳಿದರು. ಕೇಂದ್ರದ ನಿರ್ಲಕ್ಷ್ಯದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕರ್ನಾಟಕಕ್ಕೆ ಎನ್‌ಡಿಆರ್‌ಎಫ್ ಹಣ ಬಂದಿಲ್ಲ ಎಂದು ಹೇಳಿದರು. ಬರ ಪರಿಸ್ಥಿತಿ ಕುರಿತು ಚರ್ಚಿಸಲು ಕೇಂದ್ರ ಸಚಿವರನ್ನು ನೇಮಿಸುವಂತೆ ರಾಜ್ಯದಿಂದ ಹತ್ತಾರು ಪತ್ರಗಳಿಗೆ ಕೇಂದ್ರವು ಸ್ಪಂದಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ದರು..

ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/D6bfj7BBl7lLxTGZOcd2Mh

ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ :-

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಬರ ಪರಿಹಾರ ಬಿಡುಗಡೆಗೆ ದಿನಾಂಕ ಫಿಕ್ಸ್ ಕುರಿತು ನೀಡಿದ ಮಾಹಿತಿ ಉಪಯೋಗವಿದೆ.

ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

ಇದನ್ನು ಓದಿರಿ :- 🌱ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿ ಈ ರೈತರಿಗೆ ಹಣ ವರ್ಗಾವಣೆ ಆಗಿಲ್ಲ
➡️ ಈ ಯೋಜನೆ ಅಡಿ ರೈತರಿಗೆ ಎಷ್ಟು ಹಣ ಬಂದಿದೆ, ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻👇🏻
https://krushivahini.com/2024/06/17/pmfby-scheme-beneficiary-status/
💙💜💚✨

Leave a Reply

Your email address will not be published. Required fields are marked *