Adhaar linked drought relief farmers list :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ಬರ ಪರಿಹಾರ ಹಣವನ್ನು ಯಾವಾಗ ಹಾಕುತ್ತಾರೆ?? ಇನ್ನು ಅದರೂ ಬರ ಪರಿಹಾರ ಹಣ ಯಾವಾಗ ಹಾಕುತ್ತಾರೆ?? ಎಷ್ಟು ಜನ ರೈತರಿಗೆ ಸಿಗಲಿದೆ ಮೊದಲ ಕಂತಿನ ಬರ ಪರಿಹಾರ ಹಣ??

ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು.

https://twitter.com/CMofKarnataka/status/1742109158361780275?t=iWHci46UUjATzAPyFevW9w&s=19

ನಿಮ್ಮ ಲಿಂಕ್ ಆಗಿರುವ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಇಲ್ಲಿದೆ ನೋಡಿರಿ 👇🏻

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್

https://uidai.gov.in/en/

ನಂತರ ಮುಂದಿನ ಮುಖಪುಟದಲ್ಲಿ ಕಾಣುವ ಹಾಗೆ ಆಧಾರ್ ಸರ್ವಿಸಸ್(Adhaar services) ಅದರ ಮೇಲೆ ಕ್ಲಿಕ್ ಮಾಡಿ..

ನಂತರ ಮುಂದೆ ಕಾಣುವ ಮುಖಪುಟದಲ್ಲಿ ಆಧಾರ್ ಲಿಂಕಿಂಗ್ ಸ್ಟೇಟಸ್ (Adhaar Linking status) ಮೇಲೆ ಕ್ಲಿಕ್ ಮಾಡಿ

ನಂತರ ಅದೇ ಮುಖಪುಟದಲ್ಲಿ ಕೆಲಗೆ ಕಾಣುವ ಹಾಗೆ ಬ್ಯಾಂಕ್ ಸೀಡಿಂಗ್ ಸ್ಟೇಟಸ್ (bank seeding status ) ಮೇಲೆ ಕ್ಲಿಕ್ ಮಾಡಿ..

ನಂತರ ಅಲ್ಲಿ ಲಾಗಿನ್ ಕೇಳುತ್ತದೆ ನಿಮ್ಮ ಆಧಾರ್ ಸಂಖ್ಯೆ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಮತ್ತು ನಿಮ್ಮ ಮೊಬೈಲ್ ಬಗ್ಗೆ ಬಂದಿರುವ ಓಟಿಪಿಯನ್ನು ಹಾಕಿ ಲಾಗಿನ್ ಆಗಿ..

ನಂತರ ಅದೇ ಬ್ಯಾಂಕ್ ಸಿಡಿಂಗ್ ಸ್ಟೇಟಸ್ ಮೇಲೆ ಇನ್ನೊಮ್ಮೆ ಒತ್ತಿ.. ನಂತರ ಅಲ್ಲಿ ನಿಮ್ಮ ಸ್ಟೇಟಸ್ ಆಕ್ಟಿವ್ ಎಂದು ಬಂದರೆ ನಿಮಗೆ ಬರ ಪರಿಹಾರದ ಹಣ ಆಗುತ್ತದೆ..

ಇದನ್ನು ಓದಿರಿ :-🌱40 ಲಕ್ಷ ರೈತರಿಗೆ 4100 ಕೋಟಿ ಬರ ಪರಿಹಾರ ಬಿಡುಗಡೆ ನಿಮ್ಮ ಹೆಸರು ಈ ಲಿಸ್ಟ್ ನಲ್ಲಿ ಇದೆ, ಚೆಕ್ ಮಾಡಿಕೊಳ್ಳಿ ✨💚
https://krushivahini.com/2024/06/24/drought-relief-to-40-lakh-farmers

ಬರ ಪರಿಹಾರದ ಹಣ ಇನ್ನೂ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಇಲ್ಲಿ ಚೆಕ್ ಮಾಡಿಕೊಳ್ಳಿ 👇🏻

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.

ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.

ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.

ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..

ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.

ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಅಡಿಯಲ್ಲಿ ಜಮೆ ಆಗಿರುವ ಹಣದ ಸ್ಟೇಟಸ್ ಅನ್ನು ಈ ಕೆಳಕಂಡಂತೆ ನೀವು ನಿಮಗೆ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ನೋಡಬಹುದು..

ಅದೇ ರೀತಿಯಾಗಿ ರೈತಶಕ್ತಿ ಯೋಜನೆಯ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಡೀಸೆಲ್ ಸಬ್ಸಿಡಿ ಯೋಜನೆಯ ಅಡಿ ಎಷ್ಟು ಹಣ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ನೋಡಬಹುದು.

ಮುಂದಿನ ಹಂತದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ನಿಮಗೆ ಎಷ್ಟು ಹಣ ಜಮೆಯಾಗಿದೆ ಎಂಬ ಸ್ಟೇಟಸ್ ಅನ್ನು ಅಲ್ಲಿ ನೋಡಬಹುದು..

ನಾವು ಈ ಮೇಲೆ ಕಾಣಿಸಿದ ಎಲ್ಲ ಮಾಹಿತಿಯು ಸರಿಯಾಗಿದ್ದು ಸರ್ಕಾರದ ಅಡಿ ಬರುವ ಎಲ್ಲಾ ಯೋಜನೆಗಳ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಸರಳವಾಗಿ ನೀವು ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.

ದಯವಿಟ್ಟು ಈ ಲೇಖನವನ್ನು ಕೊನೆಯವರೆಗೆ ಓದಿ ತಪ್ಪದೇ ಶೇರ್ ಮಾಡಿ 🙏🏻🙏🏻..

ಬೆಂಗಳೂರು: ಬರ ಘೋಷಿತ 223 ತಾಲೂಕುಗಳ ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2 ಸಾವಿರ ರೂ.ವರೆಗೆ ಬೆಳೆ ನಷ್ಟ ಪರಿಹಾರ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ರೈತರಿಗೆ ಮೊದಲ ಬರ ಪರಿಹಾರ: ಮುಂದಿನ ವಾರದೊಳಗೆ ವಿತರಣೆಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ರೂ.2,000 ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬರ ಪರಿಹಾರದ ಹಣ ಇವರಿಗೆ ಬರಲಿದೆ 👇🏻

ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ಆ ಮುಖಪುಟದಲ್ಲಿ ಕಾಣುವ ಹಾಗೆ ನಿಮ್ಮ ಜಿಲ್ಲೆ, ತಾಲೂಕು,ಹೋಬಳಿ, ನಿಮ್ಮ ಗ್ರಾಮ, ವರ್ಷ, ಸೀಸನ್ (Kharif), ಹಾಗೂ calamity type (drought)ಆಯ್ಕೆ ಮಾಡಿಕೊಂಡು. ನಂತರ Get report ಮೇಲೆ ಕ್ಲಿಕ್ ಮಾಡಿ..

ರೈತರಿಗೆ ಮೊದಲನೇ ಕಂತಿನ ಬರ ಪರಿಹಾರದ ಹಣ ವರ್ಗಾವಣೆ ಕುರಿತು ಸಿಎಂ ಸಿದ್ದರಾಮಯ್ಯನವರು ಹಂಚಿಕೊಂಡಿರುವ ಮಾಹಿತಿಯ ಪ್ರಕಾರ ಅರ್ಹ ರೈತರಿಗೆ ಎಲ್ಲಾ ಕಂತಿನಲ್ಲಿ ರೂ 2,000 ಹಣ ಸಿಗಲಿದೆ..

ಮೊದಲ ಕಂತಿನ ಹಣ ವರ್ಗಾವಣೆ ಬಗ್ಗೆ ಸುದೀರ್ಘ ವಿವರಣೆಯೊಂದಿಗೆ ಎಲ್ಲಾ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯನವರು ಬರ ಪರಿಹಾರ ಬಿಡುಗಡೆ ಕುರಿತು ಕೇಂದ್ರ ಸರ್ಕಾರಕ್ಕೆ ಅನೇಕ ಬಾರಿ ಬರೆದ ಪತ್ರಗಳಿಗೆ ಇಲ್ಲಿಯವರೆಗು ಯಾವುದೇ ಯಾವುದೇ ತರಹದ ಸ್ಪಂದನೆ ಸಿಕ್ಕಿಲ್ಲ ಹಾಗೂ ಯಾವುದೇ ಪ್ರತಿಕ್ರಿಯೆ ತಿರುಗಿ ಬಂದಿರುವುದಿಲ್ಲ.

ಈ ಹಿಂದೆ ರಾಜ್ಯದಿಂದ 3 ಸಚಿವರನ್ನು ದೆಹಲಿಗೆ ಕೇಂದ್ರ ಸರ್ಕಾರದ ಸಚಿವರೊಂದಿಗೆ ಪರಿಹಾರ ಬಿಡುಗಡೆ ಕುರಿತು ಚರ್ಚೆಗೆ ಮಾಡಲು ಕಳುಹಿಸಿದರು ಆದರು ಕೂಡ ಒಳ್ಳೆಯ ಫಲಿತಾಂಶ ಸಿಕ್ಕಿಲ್ಲ ಎಂದು ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು ಈ ಕುರಿತು ಹೆಚ್ಚು ಮಾಹಿತಿ ತಿಳಿಸಿರುವ ಅವರು ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಬರ ಪರಿಹಾರ ಹಣ ವರ್ಗಾವಣೆಯ ಬಗ್ಗೆ ಇನ್ನೂ ಸಹ ಪ್ರಾಥಮಿಕ ಸಭೆ ನಡೆಯದಿರುವ ಹಿನ್ನೆಲೆಯಲ್ಲಿ.

ರಾಜ್ಯ ಸರ್ಕಾರದಿಂದ ರೈತರಿಗೆ ತುರ್ತು ಪರಿಸ್ಥಿತಿಗೆ ಅರ್ಥಿಕವಾಗಿ ನೆರವು ನೀಡುವ ನಿಟ್ಟಿನಲ್ಲಿ ಮೊದಲ ಕಂತಿನಲ್ಲಿಯೇ ಅರ್ಹ ರೈತರಿಗೆ ತಲಾ 2,000 ರೂ ವರೆಗೆ ಬೆಳೆ ಹಾನಿ ಪರಿಹಾರದ ಹಣವನ್ನು ಬಿಡುಗಡೆ ಮಾಡಿದೆ.

ನಾವು ಯಾವುದೇ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ನಾವು ಬರೆದಿರುವ ಲೇಖನವು ಅರ್ಥಪೂರ್ಣವಾಗಿದ್ದು ಎಲ್ಲರಿಗೂ ಉಪಯೋಗವಾಗುವಂತಿದ್ದರೆ ತಪ್ಪದೆ ಎಲ್ಲರಿಗೂ ಈ ಲೇಖನವನ್ನು ಶೇರ್ ಮಾಡಿ. ಇನ್ನೂ ಹೆಚ್ಚಿನ ಕೃಷಿ ಆಧಾರಿತ ಅಪ್ಡೇಟ್ ಪಡೆಯಲು ಕೃಷಿವಾಹಿನಿ ಗ್ರೂಪ್ ಸೇರಲು ಕೆಳಕಂಡ ಲಿಂಕನ್ನು ಒತ್ತಿ

https://chat.whatsapp.com/D6bfj7BBl7lLxTGZOcd2Mh

ಅಂತಿಮವಾಗಿ, ಈ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು.

ಸರ್ಕಾರದ ವಿವಿಧ ಯೋಜನೆಗಳು ಮತ್ತು ನೀತಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಅನುಸರಿಸಿ ಹಾಗೂ ಈ ಮಾಹಿತಿಯನ್ನು ತಪ್ಪದೆ ನಿಮ್ಮ ಪರಿಚಿತರೊಂದಿಗೆ ಶೇರ್ ಮಾಡಿಕೊಳ್ಳಿ.(krushivahini) ಸದಾ ರೈತರ ಸೇವೆಯಲ್ಲಿ.

Leave a Reply

Your email address will not be published. Required fields are marked *