Crop damage compensation amount :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಈ ಜಿಲ್ಲೆಗೆ ಬೆಳೆ ಪರಿಹಾರ ಹಣ ಬಂದಿದೆ ತಪ್ಪದೇ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಿ

ಈ ಜಿಲ್ಲೆಯ ರೈತರಿಗೆ ಬೆಳೆ ಹಾನಿ ಪರಿಹಾರ ಜಮಾ :-ಪ್ರವಾಹ ಪರಿಸ್ಥಿತಿಯಿಂದಾಗಿ ಉಂಟಾಗಿರುವ ಹಾನಿಗೆ ಕೇಂದ್ರ ಸರ್ಕಾರವು 560 ಕೋಟಿ ರೂ. ಪರಿಹಾರವನ್ನು ಈಗಾಗಲೇ ಒದಗಿಸಿದೆ.

ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಮೊದಲ ಮತ್ತು ಎರಡನೇ ಹಂತದಲ್ಲಿ ಇಲ್ಲಿಯವರೆಗೆ ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯ ಏಳು ತಾಲ್ಲೂಕಿನ 69,573 ರೈತ ಫಲಾನುಭವಿಗಳಿಗೆ 48.45 ಕೋಟಿ ರೂ.ಗಳನ್ನು ಒಟ್ಟು ಕ್ಷೇತ್ರ 55,809.19 ಹೆಕ್ಟೇರ್ ಗೆ ಇನ್ಸುಟ್ ಸಬ್ಸಿಡಿ(Input subsidy) ಯನ್ನು ಜಮೆ ಮಾಡಲಾಗಿದೆ ತಿಳಿಸಿದರು.

ಇದನ್ನು ಓದಿರಿ :- ಬೆಳೆ ವಿಮೆ ಹಣ ಎಷ್ಟು ಜಮೆಯಾಗಿದೆ! ಆಧಾರ್ ನಂಬರ್ ಹಾಕಿ ಚೆಕ್ ಮಾಡಿಕೊಳ್ಳಿ 👇🏻🌱💚https://krushivahini.com/2025/01/12/bele-vime-beneficiary-status/

ಅಷ್ಟೇ ಅಲ್ಲದೆ ಈಗಾಗಲೇ ಸೆಪ್ಟೆಂಬ‌ರ್ ಹಾಗೂ ಅಕ್ಟೋಬ‌ರ್ ತಿಂಗಳಿನಲ್ಲಿ ಧಾರವಾಡ ಜಿಲ್ಲೆಯ ಎರಡು ತಾಲೂಕುಗಳಿಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ ಎಂದು ಪ್ರಕಟಣೆಯನ್ನು ನೀಡಿದ್ದಾರೆ..

ಅಳ್ಳಾವರ ತಾಲ್ಲೂಕಿನ 69 ಫಲಾನುಭವಿಗಳಿಗೆ, ಹುಬ್ಬಳ್ಳಿ ತಾಲ್ಲೂಕಿನ 8,616 ಫಲಾನುಭವಿಗಳಿಗೆ, ಹುಬ್ಬಳ್ಳಿ ನಗರ ತಾಲ್ಲೂಕಿನ 741 ಫಲಾನುಭವಿಗಳಿಗೆ, ಕುಂದಗೋಳ, ನವಲಗುಂದ, ಅಣ್ಣಿಗೇರಿ ತಾಲೂಕಿನ ಫಲಾನುಭವಿಗಳಿಗೆ ಒಟ್ಟು ಕ್ಷೇತ್ರ ಹೆಕ್ಟೇರ್ ಗೆ ಇನ್ಸುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಇದನ್ನು ಓದಿರಿ :- ನಿಮ್ಮ ಜಮೀನಿನ ಸರ್ವೇ ನಂಬರ್ ಹಾಕಿ ಬೆಳೆ ವಿಮೆ ಹಣ ಜಮಾ ಚೆಕ್ ಮಾಡಿಕೊಳ್ಳಿ 👇🏻🌱💚https://krushivahini.com/2025/01/08/check-crop-insurance-status/

ಬೆಳೆ ಪರಿಹಾರದ ಹಣ ಈಗಾಗಲೇ ಜಮೆಯಾಗುತ್ತಿದೆ ನಿಮ್ಮ ಖಾತೆಗೆ ಹಣ ವರ್ಗಾವಣೆ ಸ್ಥಿತಿ ಚೆಕ್ ಮಾಡಿಕೊಳ್ಳಿ

👇🏻ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಡಿಬಿಟಿ(DBT Karnataka application)ಕರ್ನಾಟಕ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಹಾಗೂ ಇನ್ಸ್ಟಾಲ್(Install) ಮಾಡಿಕೊಳ್ಳಿ.

ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಹಾಕಿ get otp ಮೇಲೆ ಒತ್ತಬೇಕು.

ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿಯನ್ನು(OTP) ಹಾಕಿ ವೆರಿಫೈ (Verify OTP )ಓಟಿಪಿ ಮೇಲೆ ಒತ್ತಬೇಕು.

ನಂತರ ನಿಮಗೆ ಬೇಕಾಗಿರುವ ನಾಲ್ಕು ಅಂಕಿಯmPIN create ಮಾಡಿಕೊಂಡು, ನಂತರ confirm mPIN ಹಾಕಿ,Submit ಬಟನ್ ಮೇಲೆ ಒತ್ತಿರಿ..

ನಂತರ ಅಲ್ಲಿ ಕಾಣಿಸುವ Payment status ಮೇಲೆ ಕ್ಲಿಕ್ ಮಾಡಿ.

ತದನಂತರ ನಿಮಗೆ ಇಲ್ಲಿಯವರೆಗೂ ಸರ್ಕಾರದಿಂದ ಬಂದಿರುವ ಸಹಾಯಧನದ ಮಾಹಿತಿಯು ದೊರೆಯುತ್ತದೆ.

ಅದರಲ್ಲಿ ಪ್ರಮುಖವಾಗಿ ನೀವು Input subsidy for crop loss ಇದರ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಯಾವ ಖಾತೆಗೆ ಎಷ್ಟು ಬೆಳೆ ಪರಿಹಾರ ಹಣ ಜಮೆಯಾಗಿದೆ ನಿಮಗೆ ತಿಳಿಯುತ್ತದೆ..

ಎರಡನೇ ಹಂತದಲ್ಲಿ ಧಾರವಾಡ ಜಿಲ್ಲೆಯ ಏಳು ತಾಲ್ಲೂಕಿನ 50,515 ಫಲಾನುಭವಿಗಳಿಗೆ 4,211.17 ಲಕ್ಷ ರೂ.ಗಳನ್ನು ಒಟ್ಟು ಕ್ಷೇತ್ರ 48,102.68 ಹೆಕ್ಟೇರ್ ಗೆ ಇನ್ಸುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ..ಕೃಷಿ ಆಧಾರಿತ ಇನ್ನೂ ಹೆಚ್ಚಿನ ಮಾಹಿತಿಗಾಗಿ ತಪ್ಪದೆ ಕೃಷಿ ವಾಹಿನಿ ಜಾಲತಾಣದ ಸಂಪರ್ಕದಲ್ಲಿರಿ..

ದಯವಿಟ್ಟು ಈ ಲೇಖನವನ್ನು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ ..

🙏🏻ನಮ್ಮ ವಾಟ್ಸಪ್ ಗ್ರೂಪ್ ಸೇರಲು ಕೆಳಕಂಡ ಲಿಂಕ್ ಮೇಲೆ ಒತ್ತಿ 👇🏻🌱https://chat.whatsapp.com/D6bfj7BBl7lLxTGZOcd2Mh

Leave a Reply

Your email address will not be published. Required fields are marked *